ಪುತ್ತೂರು: ಗ್ರಾ.ಪಂ. ಅಧ್ಯಕ್ಷೆಯ ಕರ್ತವ್ಯಕ್ಕೆ ಅಡ್ಡಿ, ಜೀವ ಬೆದರಿಕೆ ಪ್ರಕರಣ: ಆರೋಪಿ ಸೆರೆ

Update: 2020-10-03 17:52 GMT

ಪುತ್ತೂರು : ಗ್ರಾಮ ಪಂಚಾಯತ್ ಅಧ್ಯಕ್ಷೆಯ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪುತ್ತೂರು ಮಹಿಳಾ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಕಾಣಿಯೂರು ಗ್ರಾಮ ಪಂಚಾಯತ್ ಸದಸ್ಯನಾಗಿದ್ದ ಗಣೇಶ್ ಕೆ.ಎಸ್. ಉದನಡ್ಕ ಬಂಧಿತ ಆರೋಪಿ. ಪಂಚಾಯತ್ ಅಧ್ಯಕ್ಷೆ ಮಾಧವಿ ಕೋಡಂದೂರು ಎಂಬವರು ನೀಡಿದ ದೂರಿನಂತೆ ಆರೋಪಿಯನ್ನು ಕಾಣಿಯೂರಿನಿಂದ ಬಂಧಿಸಲಾಗಿದೆ.

ಮಾಧವಿ ಕೋಡಂದೂರು ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ನಡೆಸುತ್ತಿದ್ದ ಸಂದರ್ಭ ಗಣೇಶ್ ಉದನಡ್ಕ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಒಡ್ಡಿ, ಕರ್ತವ್ಯಕ್ಕೆ ಅಡ್ಡಿ ಪಡಿಸಿರುವುದಾಗಿ ಮಾಧವಿ ಅವರು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ  ದೂರು ನೀಡಿದ್ದರು.

ಪ್ರಕರಣ ದಾಖಲಿಕೊಂಡಿರುವ ಮಹಿಳಾ ಠಾಣೆ ಪೊಲೀಸರು ಆರೋಪಿ ಗಣೇಶ್ ಉದನಡ್ಕನನ್ನು ಬಂಧಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News