ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಲು ಮಾತ್ರ ಸಕ್ರಿಯ: ಸಚಿವ ಈಶ್ವರಪ್ಪ

Update: 2020-10-04 12:55 GMT
ಫೈಲ್ ಫೋಟೋ

ಬೆಂಗಳೂರು, ಅ. 4: ರಾಜ್ಯದಲ್ಲಿರುವ ವಿರೋಧ ಪಕ್ಷ ಕೇವಲ ಟ್ವೀಟ್‍ಗೆ ಸೀಮಿತವಾಗಿದೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡುವಲ್ಲಿ ಮಾತ್ರ ಸಕ್ರಿಯರಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.

ರವಿವಾ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತಿಗೆ ಕಾಂಗ್ರೆಸ್‍ನಲ್ಲೇ ಬೆಲೆ ಇಲ್ಲವಾಗಿದೆ. ಕಾಂಗ್ರೆಸ್‍ಗೆ ಜನ ಬೆಂಬಲವೂ ಇಲ್ಲ. ಹೀಗಾಗಿ ರಾಜ್ಯದಲ್ಲಿರುವುದು ಟ್ವೀಟ್ ವಿರೋಧ ಪಕ್ಷವೆಂದು ಲೇವಡಿ ಮಾಡಿದ್ದಾರೆ.

ಸಿದ್ದರಾಮಯ್ಯ ಬಿಜೆಪಿ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆಯೆಂದು ಆರೋಪಿಸುತ್ತಾರೆ. ಅದನ್ನು ಸಾಬೀತು ಪಡಿಸುವುದನ್ನು ಬಿಟ್ಟು, ಟ್ವೀಟ್ ಮಾಡುವುದರಲ್ಲಿ ಕಾಲ ಕಳೆಯುತ್ತಿದ್ದಾರೆ. ಸಿದ್ದರಾಮಯ್ಯ ನಾಟಕ ಮಾಡಿಕೊಂಡೇ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರು. ಈಗಲೂ ನಾಟಕವನ್ನೇ ಮಾಡಿಕೊಂಡಿದ್ದಾರೆಂದು ಅವರು ಆರೋಪಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News