ಕಾಂಗ್ರೆಸ್ ಅಭ್ಯರ್ಥಿಗಳಿಗೆ 'ಬಿ' ಫಾರಂ ವಿತರಿಸಿದ ಡಿ.ಕೆ.ಶಿವಕುಮಾರ್

Update: 2020-10-04 14:30 GMT

ಬೆಂಗಳೂರು, ಅ. 4: ವಿಧಾನ ಪರಿಷತ್ತಿನ ಶಿಕ್ಷಕರು ಮತ್ತು ಪದವೀಧರ ಕ್ಷೇತ್ರಗಳಿಗೆ ಇದೇ ತಿಂಗಳ 28ರಂದು ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತಮ್ಮ ಪಕ್ಷದ ಅಭ್ಯರ್ಥಿಗಳಿಗೆ ರವಿವಾರ 'ಬಿ' ಫಾರಂ ವಿತರಣೆ ಮಾಡಿದರು.

ಈಶಾನ್ಯ ಶಿಕ್ಷರ ಕ್ಷೇತ್ರಕ್ಕೆ ಶರಣಪ್ಪ ಮಟ್ಟೂರು ಅವರಿಗೆ, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪ್ರವೀಣ್ ಪೀಟರ್ ಹಾಗೂ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಆರ್.ಎಮ್.ಕುಬೇರಪ್ಪ ಅವರಿಗೆ `ಬಿ' ಫಾರಂ ವಿತರಣೆ ಮಾಡಿ ಶುಭ ಕೋರಿದರು.

ನಾಲ್ಕು ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಅ.8ಕ್ಕೆ ಕೊನೆಯ ದಿನವಾಗಿದ್ದು, ಅ.9ಕ್ಕೆ ಉಮೇದುವಾರಿಕೆ ಪರಿಶೀಲನೆ ನಡೆಯಲಿದ್ದು, ಅ.12ಕ್ಕೆ ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ಅ.28ರ ಬೆಳಗ್ಗೆ 8ರಿಂದ ಸಂಜೆ 5ರ ವರೆಗೆ ಮತದಾನ ನಡೆಯಲಿದೆ. ಆ ಹಿನ್ನೆಲೆಯಲ್ಲಿ `ಬಿ' ಫಾರಂ ಪಡೆದ ಅಭ್ಯರ್ಥಿಗಳು ನಾಳೆ(ಅ.5) ಅಥವಾ ನಾಡಿದ್ದು ಉಮೇದುವಾರಿಕೆ ಸಲ್ಲಿಸುವ ಸಾಧ್ಯತೆಗಳಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News