ಮಂಗಳೂರು: ಸಿಸಿಬಿ ಇನ್ಸ್ಪೆಕ್ಟರ್ ವರ್ಗಾವಣೆ ರದ್ದು
Update: 2020-10-04 20:41 IST
ಮಂಗಳೂರು, ಅ.4: ಮಂಗಳೂರು ಡ್ರಗ್ಸ್ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಇನ್ಸ್ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ಅವರ ವರ್ಗಾವಣೆ ರದ್ದುಗೊಳಿಸಿ ಅದೇ ಸ್ಥಾನದಲ್ಲಿ ಮುಂದುವರಿಸಲಾಗಿದೆ.
ಶಿವಪ್ರಕಾಶ್ ಸ್ಥಾನಕ್ಕೆ ಕಾಪು ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಅವರನ್ನು ದಿಢೀರನೆ ವರ್ಗಾವಣೆ ಮಾಡಲಾಗಿತ್ತು. ಶಿವಪ್ರಕಾಶ್ ಅವರನ್ನು ಬೆಂಗಳೂರು ಲೋಕಾಯುಕ್ತಕ್ಕೆ ವರ್ಗಾಯಿಸಲಾಗಿತ್ತು. ಡ್ರಗ್ಸ್ ಜಾಲದ ತನಿಖೆ ಪೂರ್ಣಗೊಳ್ಳುವ ಮೊದಲೇ ಶಿವಪ್ರಕಾಶ್ ಅವರ ವರ್ಗಾವಣೆ ಹಿಂದೆ ರಾಜಕೀಯ ಒತ್ತಡದ ಆರೋಪ ಕೇಳಿಬಂದಿತ್ತು.
ಇದೀಗ ಈ ವರ್ಗಾವಣೆಯನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರು ರದ್ದುಗೊಳಿಸಿದ್ದಾರೆ. ಮಹೇಶ್ ಪ್ರಸಾದ್ ಅವರು ಕಾಪುವಿನಲ್ಲೇ ಮುಂದುವರಿಯಲಿದ್ದಾರೆ ಎಂದು ಪೊಲೀಸ್ ಉನ್ನತ ಮೂಲಗಳು ಖಚಿತಪಡಿಸಿವೆ.