ಶ್ರೀನಗರ: ಉಗ್ರರ ದಾಳಿಗೆ ಇಬ್ಬರು ಯೋಧರು ಹುತಾತ್ಮ
Update: 2020-10-05 09:39 GMT
ಹೊಸದಿಲ್ಲಿ, ಅ.5: ಜಮ್ಮು-ಕಾಶ್ಮೀರದ ಶ್ರೀನಗರದ ಹೊರವಲಯದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಇಬ್ಬರು ಸಿಆರ್ಪಿಎಫ್ ಯೋಧರು ಹುತಾತ್ಮರಾದರೆ, ಇತರ ಮೂವರು ಗಾಯಗೊಂಡಿದ್ದಾರೆ.
ಸಿಆರ್ಪಿಎಫ್ ಸಿಬ್ಬಂದಿಗಳು ಹೆದ್ದಾರಿಯಲ್ಲಿ ರಕ್ಷಣೆಯ ಕರ್ತವ್ಯದಲ್ಲಿದ್ದ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡಿನ ಸುರಿಮಳೆಗರೆದರು ಪೊಲೀಸರು ತಿಳಿಸಿದ್ದಾರೆ.
ಭಯೋತ್ಪಾದಕರು ಪರಾರಿಯಾಗಿದ್ದಾರೆಯೇ ಎಂದು ಇನ್ನೂ ಸ್ಪಷ್ಟವಾಗಿಲ್ಲ. ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಪ್ರದೇಶವನ್ನು ಸುತ್ತುವರಿಯಲಾಗಿದೆ ಎಂದು ವರದಿಯಾಗಿದೆ.