ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ಸಿಬಿಐ ದಾಳಿ ಬಗ್ಗೆ ಸಚಿವ ಈಶ್ವರಪ್ಪ ಪ್ರತಿಕ್ರಿಯೆ

Update: 2020-10-05 13:17 GMT

ಬೆಂಗಳೂರು, ಅ.5: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ಈ ಹಿಂದೆಯೂ ದಾಳಿ ಆಗಿದೆ. ಇದು ಹೊಸದಲ್ಲ. ಹವಾಲಾ ಹಣ ಸಿಕ್ಕಿರುವ ಬಗ್ಗೆ ಹಿಂದಿನ ದಾಳಿಯಲ್ಲಿ ಗೊತ್ತಾಗಿತ್ತು. ಹೀಗಾಗಿ ತನಿಖೆ ಆಗುತ್ತಿದೆ. ಇವತ್ತಿನ ಸಿಬಿಐ ದಾಳಿ ರಾಜಕೀಯ ಉದ್ದೇಶದಿಂದ ಕೂಡಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಸೋಮವಾರ ನಗರದ ಕುಮಾರಪಾರ್ಕ್ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಆರೋಪ ಮಾಡುವ ಕಾಂಗ್ರೆಸ್ ನಾಯಕರ ಹೇಳಿಕೆ ಕಂಡು ಆಶ್ಚರ್ಯ ಆಯ್ತು. ಈ ಹಿಂದೆ ಯಡಿಯೂರಪ್ಪ ಮೇಲೂ ದಾಳಿ ಆಗಿತ್ತು. ಆಗ ಕಾಂಗ್ರೆಸ್ ನಾಯಕರು ಏನಂತ ಹೇಳಿಕೆ ಕೊಟ್ಟಿದ್ದರು ಎಂದು ತಿರುಗೇಟು ನೀಡಿದರು.

ಉಪ್ಪು ತಿಂದವರು ನೀರು ಕುಡಿಯಲೇಬೇಕು ಅಂತ ಹೇಳಿದ್ದರು. ಕಾಂಗ್ರೆಸ್‍ಗೊಂದು ಕಾನೂನು ಬೇರೆ ಇದೆಯಾ? ಡಿಕೆಶಿ ತನಿಖೆಗೆ ಒಳಗಾಗಲಿ, ಸೀತೆಯಂತೆ ಆಪಾದನೆಗಳಿಂದ ಹೊರಗೆ ಬರಲಿ ಎಂದು ಈಶ್ವರಪ್ಪ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News