×
Ad

ಪರ್ಮಿಟ್ ಇಲ್ಲದೆ ಸಂಚರಿಸುತ್ತಿದ್ದ ರಹಿತ 4 ಅಂತರ್‌ರಾಜ್ಯ ಬಸ್‍ಗಳ ವಶ

Update: 2020-10-05 20:14 IST

ಬೆಂಗಳೂರು, ಅ.5: ಪರ್ಮಿಟ್ ಇಲ್ಲದೆ ರಾಜ್ಯದಲ್ಲಿ ಸಂಚರಿಸುತ್ತಿದ್ದ 4 ಅಂತರ್‌ರಾಜ್ಯ ಬಸ್‍ಗಳನ್ನು ವಿಶೇಷ ಕಾರ್ಯಾಚರಣೆ ನಡೆಸಿ ಇಂದು ಯಲಹಂಕ ಪ್ರಾದೇಶಿಕ ಸಾರಿಗೆ ಕಚೇರಿಯ ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ.

ಯಲಹಂಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಕಾಶ್ ಅವರ ನೇತೃತ್ವದಲ್ಲಿ ಇಂದು ಹೈದರಾಬಾದ್ ರಸ್ತೆಯಲ್ಲಿ ವಿಶೇಷ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಇದೇ ವೇಳೆ ನಾಗಾಲ್ಯಾಂಡ್ ಹಾಗೂ ಅರುಣಾಚಲ್ ಪ್ರದೇಶದ ಪರ್ಮಿಟ್ ಹೊಂದಿರುವ ಬಸ್‍ಗಳು ರಾಜ್ಯದಲ್ಲಿ ಸಂಚಾರ ನಡೆಸುತ್ತಿದ್ದನ್ನು ಗಮನಿಸಲಾಯಿತು.

ರಾಜ್ಯದ ಪರ್ಮಿಟನ್ನು ಪಡೆಯದೆ ತೆರಿಗೆ ಕಟ್ಟದೆ ಇರುವುದು ಕಂಡುಬಂದಿದೆ. ಈ ನಿಟ್ಟಿನಲ್ಲಿ ಬಸ್‍ಗಳನ್ನು ವಶಕ್ಕೆ ಪಡೆಸಿಕೊಂಡಿದ್ದು ದಾಖಲಾತಿಗಳನ್ನು ಹಾಜರುಪಡಿಸುವಂತೆ ಬಸ್ ಮಾಲಕರುಗಳಿಗೆ ನೋಟಿಸ್ ನೀಡಲಾಗಿದೆ. ಅವರು ದಾಖಲಾತಿಗಳನ್ನು ನೀಡಿದ ನಂತರ ಖಚಿತವಾದ ದಂಡದ ಮೊತ್ತದ ತಿಳಿದು ಬರಲಿದೆ ಎಂದು ಯಲಹಂಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಪ್ರಕಾಶ್ ತಿಳಿಸಿದರು.

ಕಾರ್ಯಾಚರಣೆಯಲ್ಲಿ ಯಲಹಂಕ ಸಾರಿಗೆ ಕಚೇರಿಯ ಹಿರಿಯ ಮೋಟಾರ್ ವಾಹನ ನಿರೀಕ್ಷಕರಾದ ರಾಜ್‍ಕುಮಾರ್ ಹಾಗೂ ನಿರೀಕ್ಷಕಿಯಾದ ಶ್ರೀಮತಿ ಲಕ್ಷ್ಮೀ ಅವರ ನೇತೃತ್ವದ ತಂಡ ಈ ಕಾರ್ಯಾಚರಣೆಯನ್ನು ನಡೆಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News