ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ
Update: 2020-10-05 15:03 GMT
ಹಿರಿಯಡ್ಕ, ಅ.5: ಮಹಿಳೆಯೊಬ್ಬರು ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಣಂಜಾರು ಗ್ರಾಮದ ಗುಡ್ಡೆಯಂಗಡಿಯ ಮಡಿಬೆಟ್ಟು ಎಂಬಲ್ಲಿ ಅ.4ರಂದು ಸಂಜೆ ವೇಳೆ ನಡೆದಿದೆ.
ಮೃತರನ್ನು ಮಡಿಬೆಟ್ಟುವಿನ ರಮೇಶ್ ಭಂಡಾರಿ ಎಂಬವರ ಪತ್ನಿ ಸುಜಾತ ಭಂಡಾರಿ(50) ಎಂದು ಗುರುತಿಸಲಾಗಿದೆ. ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಇವರು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯ ಹಿಂಬದಿ ಮೈಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡಿದ್ದು, ಇದರಿಂದ ಗಂಭೀರ ವಾಗಿ ಸುಟ್ಟು ಹೋಗಿ ಸ್ಥಳದಲ್ಲಿಯೇ ಮೃತಪಟ್ಟರು.
ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.