ಸ್ಯಾಂಡಲ್‍ವುಡ್‍ ಡ್ರಗ್ಸ್ ನಂಟು ಆರೋಪ: ವಿಚಾರಣೆಗೆ ಹಾಜರಾದ ಕೇರಳ ಸಿಪಿಎಂ ನಾಯಕನ ಪುತ್ರ

Update: 2020-10-06 13:02 GMT

ಬೆಂಗಳೂರು, ಅ.6: ಸ್ಯಾಂಡಲ್‍ವುಡ್‍ಗೆ ಡ್ರಗ್ಸ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಸಿಪಿಎಂ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಪುತ್ರ ಬಿನೀಶ್ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾದರು.

ಅವರನ್ನು ಮಂಗಳವಾರ ಶಾಂತಿನಗರದ ಈಡಿ ಕಚೇರಿಯಲ್ಲಿ ಸತತ 3 ಗಂಟೆಗಳ ವಿಚಾರಣೆ ನಡೆಸಿದ ತನಿಖಾಧಿಕಾರಿಗಳು, ಅವರ ಹೇಳಿಕೆಗಳನ್ನು ದಾಖಲು ಮಾಡಿಕೊಂಡರು.

ಪ್ರಕರಣದ ಪ್ರಮುಖ ಆರೋಪಿ ಆಗಿರುವ ಅನೂಪ್ ಎನ್‍ಸಿಬಿ ವಶದಲ್ಲಿದ್ದಾಗ ವಿಚಾರಣೆ ವೇಳೆ ಡ್ರಗ್ಸ್ ಪ್ರಕರಣದಲ್ಲಿ ಬಿನೀಶ್ ಪಾತ್ರದ ಬಗ್ಗೆ ಬಾಯ್ಬಿಟ್ಟಿದ್ದ ಎನ್ನಲಾಗಿದೆ. ಹೀಗಾಗಿ ಈಡಿ ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಈ ಹಿನ್ನೆಲೆ ಬಿನೀಶ್ ಇಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾದರು ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News