×
Ad

ಅ.7ರಿಂದ ಸಾಗರ ಕವಚ ಅಣುಕು ಕಾರ್ಯಾಚರಣೆ

Update: 2020-10-06 20:36 IST

ಉಡುಪಿ, ಅ.6: ಭಯೋತ್ಪಾದಕ ದಾಳಿಗಳನ್ನು ಹಾಗೂ ಇತರ ವಿದ್ವಂಸಕ ಕೃತ್ಯಗಳನ್ನು ತಡೆಗಟ್ಟಲು ಯಾವ ರೀತಿ ಮುಂಜಾಗೃತ ಕ್ರಮಗಳನ್ನು ಅನುಸರಿ ಸಬೇಕು ಮತ್ತು ಭದ್ರತಾ ದೃಷ್ಟಿಯಿಂದ ಪ್ರಸ್ತುತ ರಕ್ಷಣಾ ಕ್ರಮಗಳು ಮತ್ತು ಸಿದ್ಧತೆಗಳು ಎಷ್ಟು ಸಮರ್ಥವಾಗಿವೆ ಎಂಬುದನ್ನು ಸ್ವಯಂ ಮೌಲ್ಯಮಾಪನ ಮಾಡಿಕೊಳ್ಳುವ ಉದ್ದೇಶದಿಂದ ಜಿಲ್ಲಾಡಳಿತ, ಕರಾವಳಿ ಕಾವಲು ಪಡೆ, ಪೋಲಿಸ್ ಇಲಾಖೆಗಳ ಸಹಭಾಗಿತ್ವದಲ್ಲಿ ಜಿಲ್ಲೆಯಾದ್ಯಂತ ಸಾಗರ ಕವಚ ಅಣುಕು ಪ್ರದರ್ಶನದ ಕಾರ್ಯಾಚರಣೆಯನ್ನು ಅ.7 ಮತ್ತು 8ರಂದು ಜಿಲ್ಲೆಯಲ್ಲಿ ಆಯೋಜಿಸಲಾಗಿದೆ.

ರಕ್ಷಣಾ ಸಾಮರ್ಥ್ಯವನ್ನು ಸನ್ನದ್ಧಗೊಳಿಸುವುದು ಮತ್ತು ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳ ನಡುನ ಸಾಮರಸ್ಯವನ್ನು ವೃದ್ಧಿಸಲು ಹಾಗೂ ಪ್ರಸ್ತುತ ಇರುವ ಸಾಮರ್ಥ್ಯವನ್ನು ಉನ್ನತೀಕರಣಗೊಳಿಸುವ ಉದ್ದೇಶದಿಂದ ಸಾಗರ ಕವಚ ಪ್ರಯೋಗವನ್ನು ಪ್ರತಿವರ್ಷ ನಡೆಸಲಾಗುತ್ತಿದ್ದು, ಇದು ಕೇವಲ ಅಣುಕು ಕಾರ್ಯಾಚರಣೆಯಾಗಿರುತ್ತದೆ.

ಈ ಅಣುಕು ಪ್ರದರ್ಶನವನ್ನು ಸಾರ್ವಜನಿಕ ಸ್ಥಳಗಳಾದ ಪ್ರಾರ್ಥನಾ ಮಂದಿರ, ಪ್ರತಿಷ್ಠಿತ ಶಾಲೆ/ಕಾಲೇಜ್‌ಗಳಲ್ಲಿ, ರೈಲು ನಿಲ್ಡಾಣ, ಬಸ್ ನಿಲ್ಡಾಣ, ಬೀಚ್, ಬಂದರು, ಶಾಪಿಂಗ್ ಕಾಂಪ್ಲೆಕ್ಸ್, ಕಡಲ ಕಿನಾರೆಗಳಲ್ಲಿ, ರಸ್ತೆಗಳಲ್ಲಿ ಇತರೆ ಪ್ರಮುಖ ಸ್ಥಳಗಳಲ್ಲಿ ನಡೆಸಲಾಗುವುದು.

ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆ, ಸಾರ್ವಜನಿಕರನ್ನು ಹಾಗೂ ವಾಹನಗಳನ್ನು ತಪಾಸಣೆ ನಡೆಸಲಿದ್ದು, ಸಾರ್ವಜನಿಕರು ಸಹಕಾರ ನೀಡು ವಂತೆ ಹಾಗೂ ಅಪರಿಚಿತ ಗುರುತು ಪರಿಚಯ ಇಲ್ಲದ ಸಂಶಯಾಸ್ಪದ ವ್ಯಕ್ತಿಗಳ ಹಾಗೂ ಸಂಶಯಾಸ್ಪದ ವಸ್ತುಗಳು ಸ್ಥಳದಲ್ಲಿ ದೊರತಲ್ಲಿ ಯಾವುದೇ ರೀತಿ ಭಯಬೀತರಾಗದೆ ಸಮೀಪದ ಪೊಲೀಸ್ ಠಾಣೆ ಅಥವಾ ಉಡುಪಿ ಪೊಲೀಸ್ ಅಧೀಕ್ಷಕರ ಕಚೇರಿ (ದೂರವಾಣಿ-100), ಉಡುಪಿ ಕರಾವಳಿ ಕಾವಲು ಪಡೆಯ ಪೊಲೀಸ್ ಅಧೀಕ್ಷಕರು (ದೂರವಾಣಿ-1093), ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ (ದೂರವಾಣಿ-1077/2574802) ಕಂಟ್ರೋಲ್ ರೂಮ್‌ಗೆ ಮಾಹಿತಿಯನ್ನು ನೀಡಿ ಸಾಗರ ಕವಚ ಅಣುಕು ಪ್ರದರ್ಶನದ ಕಾರ್ಯಾಚರಣೆಯನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News