ಶರತ್ ಬಿ. ವರ್ಗಾವಣೆ ವಿಚಾರ: ವಿಚಾರಣೆಯನ್ನು ಅ.14ಕ್ಕೆ ಮುಂದೂಡಿದ ಸಿಎಟಿ
Update: 2020-10-07 14:12 GMT
ಮೈಸೂರು,ಅ.7: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಶರತ್ ಅವರನ್ನು ವರ್ಗಾವಣೆ ಮಾಡಿರುವ ಕುರಿತಂತೆ ವಿಚಾರಣೆ ನಡೆಸಿದ ಸಿಎಟಿ ವಿಚಾರಣೆ ಮುಂದೂಡಿದೆ.
ಕೇವಲ 29 ದಿನಕ್ಕೆ ತಮ್ಮನ್ನು ವರ್ಗಾವಣೆ ಮಾಡಿ, ತಮ್ಮ ಸ್ಥಾನಕ್ಕೆ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿರುವ ಸರ್ಕಾರದ ತೀರ್ಮಾನವನ್ನು ಪ್ರಶ್ನಿಸಿ ಶರತ್ ಅವರು ಸಿಎಟಿ ಮೊರೆ ಹೋಗಿದ್ದರು. ಇವತ್ತು ವಿಚಾರಣೆ ಕೈಗೆತ್ತಿಕೊಂಡ ಸಿಎಟಿ ವಿಚಾರಣೆಯನ್ನು ಅ.14ಕ್ಕೆ ಮುಂದೂಡಿದೆ. ಇದರಿಂದ ರೋಹಿಣಿ ಸಿಂಧೂರಿ ಅವರಿಗೆ ತಾತ್ಕಾಲಿಕ ರಿಲೀಫ್ ದೊರಕಿದಂತಾಗಿದೆ.