ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2020-10-07 16:34 GMT

ಬ್ರಹ್ಮಾವರ, ಅ.7: ವೈಯಕ್ತಿಕ ಕಾರಣದಿಂದ ಮನನೊಂದ ಉಪ್ಪೂರು ಗ್ರಾಮದ ಚಕ್ಕುಲಿಕಟ್ಟೆ ಕೊಳಲಗಿರಿ ನಿವಾಸಿ ಯಶವಂತ(17) ಎಂಬವರು ಸೆ.6ರಂದು ಮನೆಯ ಮಾಡಿನ ಜಂತಿಗೆ ನೇಣು ಬಿಗಿದು ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೋಟ: ಜಾನುವಾರು ಕಟ್ಟೆಯ ಪಾರ್ವತಿ ಬಾಯಿ(54) ಎಂಬವರು ಅ.7 ರಂದು ಮಧ್ಯಾಹ್ನ ವೇಳೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News