ಸುಳ್ಯದಲ್ಲಿ ಗುಂಡಿನ ದಾಳಿ; ಓರ್ವ ಗಂಭೀರ ಗಾಯ

Update: 2020-10-08 03:42 GMT

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಇಂದು ಬೆಳಗ್ಗೆ ಶೂಟೌಟ್ ನಡೆದಿದ್ದು, ಜನತೆಯನ್ನು ಬೆಚ್ಚಿ ಬೀಳಿಸಿದೆ.

ಸುಳ್ಯದ ಶಾಂತಿನಗರದಲ್ಲಿ ಗುರುವಾರ ಮುಂಜಾನೆ ಈ ಘಟನೆ ನಡೆದಿದ್ದು, ಇಲ್ಲಿ ವಾಸವಾಗಿದ್ದ ವ್ಯಕ್ತಿಯೋರ್ವರಿಗೆ ಕಾರಿನಲ್ಲಿ ಬಂದ ಅಪರಿಚಿತರು ಗುಂಡಿಕ್ಕಿದ್ದಾರೆ.

ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಾಳು ವರ್ಷದ ಹಿಂದೆ ನಡೆದ ಸಂಪಾಜೆಯ ಕಳಗಿ ಬಾಲಚಂದ್ರರ ಕೊಲೆ ಪ್ರಕರಣದ ಆರೋಪಿ ಎಂದೂ ಹೇಳಲಾಗುತ್ತಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News