ಮಹಾದಾಯಿ ವಿವಾದ ಮುಗಿದ ಅಧ್ಯಾಯ: ಜಗದೀಶ್ ಶೆಟ್ಟರ್

Update: 2020-10-08 13:24 GMT

ಧಾರವಾಡ, ಅ.8: ಮಹದಾಯಿ ಸಮಸ್ಯೆ ಮುಗಿದು ಹೋದ ಅಧ್ಯಾಯ. ಈಗಾಗಲೇ ಅದು ಸಹ ನಮ್ಮ ಪರ ಅವಾರ್ಡ್ ಆಗಿದೆ. ಈಗ ಕೇವಲ ಪರಿಸರ ಇಲಾಖೆ ಮತ್ತು ಅರಣ್ಯ ಇಲಾಖೆಯ ಸಮ್ಮತಿ ಬೇಕಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ಸಮಸ್ಯೆ ಮುಗಿದು ಹೋದ ಅಧ್ಯಾಯ. ಈಗಾಗಲೇ ಗೆಜೆಟ್ ನೋಟಿಫಿಕೇಶನ್ ಕೂಡ ಆಗಿದೆ. ಈಗ ಕೇವಲ ಪರಿಸರ ಇಲಾಖೆ ಮತ್ತು ಅರಣ್ಯ ಇಲಾಖೆಯ ಸಮ್ಮತಿ ಬೇಕಾಗಿದೆ ಎಂದರು.

ಮುಖ್ಯಮಂತ್ರಿ ಬಿ.ಎಸ್‍ಯಡಿಯೂರಪ್ಪ ಅವರು ಈಗಾಗಲೇ ಮಹಾದಾಯಿ ಯೋಜನೆಗೆ 500 ಕೋಟಿ ರೂ. ಹಣವನ್ನು ತೆಗೆದಿಟ್ಟಿದ್ದಾರೆ. ಅನಾವಶ್ಯಕವಾಗಿ ಪ್ರಚೋದನೆ ಮಾಡುವ ಕೆಲಸ ನಡೀತಾ ಇದೆ. ಆದರೆ ಮಹದಾಯಿ ವಿಷಯದಲ್ಲಿ ಕಾನೂನು ರೀತಿಯಾಗಿ ನಾವು ಜಯಶಾಲಿಯಾಗಿದ್ದೇವೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News