​ಪ್ರತ್ಯೇಕ ಘಟನೆ: ಇಬ್ಬರು ಆತ್ಮಹತ್ಯೆ

Update: 2020-10-08 16:26 GMT

ಕುಂದಾಪುರ, ಅ.8: ಮೀನುಗಾರಿಕೆ ವೃತ್ತಿ ಮಾಡಿಕೊಂಡಿದ್ದು, ಹೆಂಡತಿ ಮಕ್ಕಳೊಂದಿಗೆ ವಾಸವಾಗಿದ್ದ ವ್ಯಕ್ತಿಯೊಬ್ಬರು ಮನೆಯ ಪಕ್ಕದಲ್ಲೇ ಇರುವ ಹಾಡಿಯ ಮರವೊಂದಕ್ಕೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಟ್‌ಬೆಲ್ತೂರು ಗ್ರಾಮದ ಮುಳ್ಳುಕುಂಟೆಯಿಂದ ವರದಿಯಾಗಿದೆ.

ಲಕ್ಷ್ಮಣ (40) ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು. ಇವರು ಬುಧವಾರ ರಾತ್ರಿ 9:30ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ಹಿಂದಿರುಗದೇ ನಾಪತ್ತೆಯಾಗಿದ್ದರು. ಮನೆಯವರು ಇಂದು ಹುಡುಕಾಡಿದಾ ಮುಳ್ಳುಕುಂಟೆಯ ಮಂಜುನಾಥ ಶೆಟ್ಟಿ ಎಂಬವರಿಗೆ ಸೇರಿದ ಹಾಡಿಯ ಕಾಟು ಮರವೊಂದಕ್ಕೆ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಯಿತು.

ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರ: ಮಾನಸಿಕ ಖಿನ್ನತೆಯಿಂದ ಬಳಲುತಿದ್ದ ಜಯರಾಜ್ (37) ಎಂಬವರು ನಿನ್ನೆ ರಾತ್ರಿ 9ಗಂಟೆಯ ಬಳಿಕ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟೇಶ್ವರದ ಬೀಜಾಡಿ ಗ್ರಾಮದ ಸೆಟ್ಟಿಬೆಟ್ಟು ಎಂಬಲ್ಲಿ ನಡೆದಿದೆ. ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News