×
Ad

ನಿರುದ್ಯೋಗ ಸಮಸ್ಯೆ: ಯುವಕ ಆತ್ಮಹತ್ಯೆ

Update: 2020-10-08 23:48 IST

ಬೆಂಗಳೂರು, ಅ.8: ಅನ್‍ಲಾಕ್ ಬಳಿಕವೂ ಉದ್ಯೋಗ ದೊರೆಯದ ಕಾರಣಕ್ಕೆ ಜಿಗುಪ್ಸೆಗೊಂಡು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 23 ವರ್ಷದ ಶಶಾಂಕ್ ಆತ್ಮಹತ್ಯೆ ಶರಣಾದ ಯುವಕ ಎಂದು ತಿಳಿದುಬಂದಿದೆ.

ಕೆಲ ತಿಂಗಳ ಹಿಂದೆ ದಾಂಡೇಲಿಯಿಂದ ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದ. ಬಿಕಾಂ ಪದವೀಧರನಾಗಿದ್ದ ಶಶಾಂಕ್ ಹಲವು ಕಂಪೆನಿಗಳಲ್ಲಿ ಸಂದರ್ಶನಕ್ಕೆ ಹಾಜರಾಗಿದ್ದರೂ ಕೆಲಸ ಮರಿಚೀಕೆಯಾಗಿತ್ತು. ಜಯನಗರದಲ್ಲಿ ಸ್ನೇಹಿತರೊಂದಿಗೆ ಮನೆಯೊಂದರಲ್ಲಿ ನೆಲೆಸಿದ್ದ ಎನ್ನಲಾಗಿದೆ.
ಬುಧವಾರ ತನ್ನ ಕೊಠಡಿಯಲ್ಲಿ ಯಾರು ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. 
ಈ ಸಂಬಂಧ ಜಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News