×
Ad

ವಿಕಲಚೇತನರ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಅಹ್ವಾನ

Update: 2020-10-09 20:12 IST

ಉಡುಪಿ, ಅ.9: ಡಿ.3ರಂದು ವಿಶ್ವ ವಿಕಲಚೇತನರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ, ಸರಕಾರದ ವತಿಯಿಂದ ವಿಕಲಚೇತನರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟ ಸೇವೆ ಸಲ್ಲಿಸಿರುವ/ಸಲ್ಲಿಸುತ್ತಿರುವ ವಿಶೇಷ ಶಿಕ್ಷಕರಿಗೂ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರಸಲು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉದ್ದೇಶಿಸಿದೆ.

ಆಸಕ್ತರು ನಿಗದಿತ ಅರ್ಜಿ ನಮೂನೆಗಳನ್ನು ಉಡುಪಿ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳು, ಸಿ ಬ್ಲಾಕ್, ಜಿಲ್ಲಾ ಪಂಚಾಯತ್ ವಿಭಾಗ, ಜಿಲ್ಲಾಧಿಕಾರಿ ಕಛೇರಿ, ರಜತಾದ್ರಿ, ಮಣಿಪಾಲ, (ದೂರವಾಣಿ: 0820-2574810/811) ಇವರಿಂದ ಅಥವಾ ಇಲಾಖೆಯ ವೆಬ್‌ಸೈಟ್‌ನಲ್ಲಿ (www.dwdsc.kar.nic.in) ಕೂಡಾ ಲಭ್ಯವಿದ್ದು, ಅಲ್ಲಿಂದಲೂ ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಅ.15ರೊಳಗೆ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಚೇರಿಗೆ ಸಲ್ಲಿುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News