ಅನುತ್ತೀರ್ಣಗೊಂಡ ಪ್ರಥಮ ಪಿಯು ವಿದ್ಯಾರ್ಥಿಗಳನ್ನು ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣಗೊಳಿಸಲು ಆದೇಶ
Update: 2020-10-10 11:00 GMT
ಬೆಂಗಳೂರು, ಅ.10: 2019-20ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಹಿತದೃಷ್ಟಿಯಿಂದ ಅ.20ರೊಳಗೆ ಕಾಲೇಜು ಹಂತದಲ್ಲಿಯೇ ಪೂರಕ ಪರೀಕ್ಷೆಯನ್ನು ನಡೆಸಿ, ಉತ್ತೀರ್ಣಗೊಳಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶಿಸಿದೆ.
ಒಂದು ವೇಳೆ ಪೂರಕ ಪರೀಕ್ಷೆಯಲ್ಲೂ ಅನುತ್ತೀರ್ಣರಾದಲ್ಲಿ ಆಯಾ ವಿಷಯಗಳ ಉತ್ತೀರ್ಣಕ್ಕೆ ಅವಶ್ಯವಿರುವ ಕನಿಷ್ಠ ಅಂಕಗಳನ್ನು ನೀಡಿ ಉತ್ತೀರ್ಣಗೊಳಿಸಿ, ಮುಂದಿನ ಶಿಕ್ಷಣಕ್ಕೆ ಅವಕಾಶ ಕಲ್ಪಿಸಬೇಕು. ಹಾಗೂ ಸದರಿ ಫಲಿತಾಂಶವನ್ನು ಸಂಬಂಧಿಸಿದ ಜಿಲ್ಲಾ ಉಪ ನಿರ್ದೇಶಕರಿಂದ ಅನುಮೋದನೆ ಪಡೆಯುವಂತೆ ಸೂಚಿಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.