ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2020-10-10 16:04 GMT

ಹಿರಿಯಡ್ಕ, ಅ.10: ಅನಾರೋಗ್ಯದಿಂದ ಬಳಲುತ್ತಿದ್ದ ಪೆರ್ಡೂರು ಅಲಂಗಾರು ನಿವಾಸಿ ಮುದ್ದು ಕುಲಾಲ್(54) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಅ.9ರಂದು ಬೆಳಗ್ಗೆ ಮನೆ ಸಮೀಪದ ಗದ್ದೆಯಲ್ಲಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಂದೂರು: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಶಿರೂರು ಗ್ರಾಮದ ಅರಮನೆಹಕ್ಲು ನಿವಾಸಿ ಶೋಭಾ (40) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಅ.9ರಂದು ಸಂಜೆ ವೇಳೆ ಮನೆಯ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಬೈಂದೂರು ಪೋಲಿಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News