ಉಪಚುನಾವಣೆಯಲ್ಲಿ ಬಿಜೆಪಿ ದ್ವೇಷದ ರಾಜಕಾರಣ ಮಾಡುವುದಿಲ್ಲ: ಸಿ.ಟಿ.ರವಿ

Update: 2020-10-10 16:42 GMT

ಶಿವಮೊಗ್ಗ: ಉಪಚುನಾವಣೆ ನಡೆಯುವ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಸಚಿವ ಸಿ.ಟಿ.ರವಿ ನಗರದಲ್ಲಿ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉಪ ಚುನಾವಣೆ ನಡೆಯುತ್ತಿರುವ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ದ್ವೇಷದ ರಾಜಕಾರಣ ನಡೆಸಿಲ್ಲ. ನಮ್ಮ ಸರ್ಕಾರದ ಕಡೆಯಿಂದ ಯಾರ ಮೇಲೂ ಸುಮ್ಮನೆ ಕೇಸ್ ಹಾಕಿಲ್ಲ. ವಿರೋಧ ಪಕ್ಷಗಳ ಆರೋಪ ಸುಳ್ಳು. ಅವರು ತಾನು ಕಳ್ಳ, ಪರರನ್ನು ನಂಬ ಎಂಬ ಮನಸ್ಥಿತಿಯಲ್ಲಿದ್ದಾರೆ ಎಂದು ಸಚಿವ ರವಿ ತಿರುಗೇಟು ನೀಡಿದರು.

ಶಿರಾ ಹಾಗೂ ಆರ್.ಆರ್.ನಗರ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳನ್ನು ಇನ್ನೆರಡು ದಿನಗಳಲ್ಲಿ ಘೋಷಣೆ ಮಾಡಲಾಗುತ್ತದೆ ಎಂದರು.

ಎರಡು ಉಪ ಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ. ಸಾಮೂಹಿಕ ಪ್ರಯತ್ನದಲ್ಲಿ ಕಾರ್ಯಕರ್ತರು, ಶಾಸಕರು, ಸಚಿವರು ಹಾಗೂ ಸಿಎಂ ಕೆಲಸ ಮಾಡುವುದರಿಂದ ಚುನಾವಣೆ ಗೆಲ್ಲಲು ನಮಗೆ ಕಷ್ಟ ಆಗುವುದಿಲ್ಲ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News