×
Ad

ಮಾಧ್ಯಮಗಳು ಮನಸ್ಸನ್ನು ಅರಳಿಸಬೇಕೆ ಹೊರತು ಕೆರಳಿಸಬಾರದು: ಮುದ್ರಾಡಿ

Update: 2020-10-11 19:56 IST

ಬ್ರಹ್ಮಾವರ, ಅ.11: ಬ್ರಹ್ಮಾವರ ತಾಲ್ಲೂಕು ಪತ್ರಕರ್ತರ ಸಂಘದ ಆಶ್ರಯ ದಲ್ಲಿ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಯನ್ನು ಕರಾವಳಿ ಮುಂಜಾವು ಪತ್ರಿಕೆಯ ಸಂಪಾದಕ ಗಂಗಾಧರ ಹಿರೇಗುತ್ತಿ ಅವರಿಗೆ ರವಿವಾರ ಬ್ರಹ್ಮಾವರದ ಬಂಟರ ಭವನದಲ್ಲಿ ಪ್ರದಾನ ಮಾಡಲಾಯಿತು.

ಪ್ರಶಸ್ತಿ ಪ್ರದಾನ ಮಾಡಿದ ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ ಮಾತನಾಡಿ, ಮಾಧ್ಯಮಗಳು ಮನಸ್ಸನ್ನು ಅರಳಿಸುವ ಕೆಲಸ ಮಾಡ ಬೇಕೇ ಹೊರತು ಕೆರಳಿಸುವ ಕೆಲಸ ಮಾಡಬಾರದು. ಪ್ರೀತಿ ವಿಶ್ವಾಸ ಏಕತೆ ಪತ್ರಿ ಕೋದ್ಯಮದಲ್ಲಿ ಅಗತ್ಯವಾಗಿದೆ. ಜನಜಾಗೃತಿ ಬಲಗೊಳ್ಳ ಬೇಕಾದರೆ ಪತ್ರಿಕೆ ಅತೀ ಅಗತ್ಯ ಎಂದು ತಿಳಿಸಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಗಂಗಾಧರ ಹಿರೇಗುತ್ತಿ, ನನ್ನ ಗುರುಗಳಾದ ವಡ್ಡರ್ಸೆ ರಘುರಾಮ ಶೆಟ್ಟರ ಹೆಸರಿನಲ್ಲಿ ಸ್ವೀಕರಿಸುತ್ತಿರುವ ಪ್ರಶಸಿತಿ ನನಗೆ ಅತ್ಯಂತ ಖುಷಿ ತಂದಿದೆ. ನಾನು ಒಂದು ಪತ್ರಿಕೆಯನ್ನು ಹೇಗೆ ನಡೆಸಬೇಕು ಎನ್ನುವುದನ್ನು ಜೀವನದಿಂದ ಕಲಿತುಕೊಂಡಿದ್ದೇನೆ ಎಂದರು.

ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಸುಧೀರ್ ಕುಮಾರ್ ಮುರೊಳ್ಳಿ ದಿಕ್ಸೂಚಿ ಭಾಷಣ ಮಾಡಿ, ಮನುಷ್ಯನನ್ನು ಪರಿವರ್ತನೆ ಮಾಡುವ ಕೆಲಸ ಪತ್ರಿಕೆಗಳಿಂದಾಗಬೇಕು. ಸಾಹಿತ್ಯದ ನಂಟು ಸ್ವಲ್ಪಮಟ್ಟಿಗಾದರೂ ಪತ್ರಕರ್ತರಿಗೆ ಇರಬೇಕು. ಖಾಸಗಿ ಬದುಕಿನೊಂದಿಗೆ ಸಮಾಜಸೇವೆಯನ್ನು ಮಾಡಿದಲ್ಲಿ ಯಶಸ್ಸು ಖಂಡಿತ ಸಿಗುತ್ತದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚಿತೂತಿರು ಪ್ರಭಾಕರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಾವರ ತಾಪಂ ಅಧ್ಯಕ್ಷೆ ಜ್ಯೋತಿ ಉದಯ ಪೂಜಾರಿ, ಮೀನು ಮಾರಾಟ ಫೆಡರೇಶನ್‌ನ ಅಧ್ಯಕ್ಷ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

ಸಂಘದ ಕಾರ್ಯದರ್ಶಿ ರಾಜೇಶ್ ಗಾಣಿಗ ಅಚ್ಲಾಡಿ ಸ್ವಾಗತಿಸಿದರು. ಸಂಚಾಲಕ ವಸಂತ ಗಿಳಿಯಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಲ್ತಾರು ನಾಗರಾಜ್ ವಂದಿಸಿದರು. ಚಂದ್ರಶೇಖರ್ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು. ನಂತರ ಕಲಾಚಿಗುರು ತಂಡದ ಹಳಿ ಹಂಬ್ಲ್ ಖ್ಯಾತಿಯ ತಂಡದವರಿಂದ ಹ್ವಾಯ್ ಬನಿ ನೆಗ್ಯಾಡ್ವ ಮತ್ತು ಗಾನ ರಸಧಾರೆ ಕಾರ್ಯಕ್ರಮ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News