ಡಾ.ಎಸ್.ಎಲ್.ಭೈರಪ್ಪಗೆ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ

Update: 2020-10-11 14:41 GMT

ಕೋಟ, ಅ.11: ಕೋಟ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ, ಕೋಟತಟ್ಟು ಗ್ರಾಮ ಪಂಚಾಯತ್, ಉಡುಪಿ ಡಾ.ಶಿವರಾಮ ಕಾರಂತ ಟ್ರಸ್ಟ್ ಆಶ್ರಯದಲ್ಲಿನೀಡಲಾಗುವ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಯನ್ನು ನಾಡೋಜ ಡಾ.ಎಸ್.ಎಲ್.ಬೈರಪ್ಪ ಅವರಿಗೆ ಅ.10 ರಂದು ಪ್ರದಾನ ಮಾಡಲಾಯಿತು.

ಕೋಟ ಕಾರಂತ ಥೀಂ ಪಾರ್ಕ್‌ನಲ್ಲಿ ಪ್ರತಿವರ್ಷ ನಡೆಯುವ ಈ ಪ್ರಶಸ್ತಿ ಪ್ರದಾನ ಸಮಾರಂಭವು ಈ ವರ್ಷ ಕೋವಿಡ್-19ರ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಪ್ರಶಸ್ತಿ ಪುರಸ್ಕೃತರ ಊರಾದ ಮೈಸೂರಿನ ಪ್ರಮತಿ ಸ್ಕೂಲಿನಲ್ಲಿ ಏರ್ಪಡಿಸಲಾಗಿತ್ತು. ಮುಜರಾಯಿ ಸಚಿವ, ಕೋಟ ಕಾರಂತ ಥೀಂ ಪಾರ್ಕ್ ಆಡಳಿತ ನಿರ್ದೇಶಕ ಕೋಟ ಶ್ರೀನಿವಾಸ ಪೂಜಾರಿ, ಭೈರಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮ ಶೇಖರ್, ಮೈಸೂರು ಸಂಸದ ಪ್ರತಾಪ ಸಿಂಹ, ಶಾಸಕ ಎಲ್.ನಾಗೇಂದ್ರ, ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮೊದಲಾದವರು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕೋಟ ಕಾರಂತ ಪ್ರತಿಷ್ಠಾನದ ಟ್ರಸ್ಟಿಗಳಾದ ಯು.ಎಸ್. ಶೆಣೈ, ಮಣೂರು ಸುಬ್ರಾಯ ಆಚಾರ್ಯ, ಕೋಟತಟ್ಟು ಗ್ರಾಪಂ ಆಡಳಿತಾಧಿ ಕಾರಿ ಡಾ.ಅರುಣ್ ಕುಮಾರ್ ಉಪಸ್ಥಿತರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News