ಡಿಜೆ-ಕೆಜಿ ಹಳ್ಳಿ ಗಲಭೆ ಪ್ರಕರಣ: ಬಿಬಿಎಂಪಿ ಮಾಜಿ ಸದಸ್ಯನಿಗೆ ಸಿಸಿಬಿ ನೋಟಿಸ್

Update: 2020-10-11 16:53 GMT

ಬೆಂಗಳೂರು, ಅ. 11: ದೇವರ ಜೀವನಹಳ್ಳಿ (ಡಿ.ಜೆ.ಹಳ್ಳಿ) ಮತ್ತು ಕಾಡುಗೊಂಡನಹಳ್ಳಿ(ಕೆ.ಜಿ.ಹಳ್ಳಿ) ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಸದಸ್ಯ ಝಾಕೀರ್ ಅವರಿಗೆ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಎರಡನೆ ಬಾರಿ ನೋಟಿಸ್ ನೀಡಲಾಗಿದೆ ಎಂದು ವರದಿಯಾಗಿದೆ.

ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಿ, ವಿಚಾರಣೆ ನಡೆಸಿದ್ದ ಸಿಸಿಬಿ ಪೊಲೀಸರು, ಝಾಕೀರ್ ಅವರ ಮೊಬೈಲ್ ವಶಕ್ಕೆ ಪಡೆದಿದ್ದರು. ಇದೀಗ ಮತ್ತೊಮ್ಮೆ ಅವರಿಗೆ ನೋಟಿಸ್ ನೀಡಿರುವ, ಸಿಸಿಬಿ, ಹೆಚ್ಚಿನ ಮಾಹಿತಿ ಸಂಗ್ರಹಿಸಲಿದೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News