ಚಾಮರಾಜನಗರ: ಗಾಂಜಾ ಸಹಿತ ಆರೋಪಿ ಸೆರೆ
Update: 2020-10-12 05:24 GMT
ಚಾಮರಾಜನಗರ : ರಾಮಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಳ್ಳಿ ಗ್ರಾಮದ ಜಮೀನಿನಲ್ಲಿ ಅಮವಾಗಿ ಗಾಂಜಾ ಬೆಳೆದಿದ್ದ ಆರೋಪಿಯ ಮೇಲೆ ದಾಳಿ ನಡೆಸಿ , 8.2 ಕೆಜಿ ಗಾಂಜಾವನ್ನು ಜಪ್ತಿ ಪಡಿಸಿಕೊಂಡು, ಜಮೀನಿನ ಮಾಲಕನನ್ನು ವಶಕ್ಕೆ ಪಡೆಯಲಾಗಿದೆ.
ಹನೂರು ತಾಲ್ಲೂಕಿನ ರಾಮಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯ ಹೊಸಳ್ಳಿ ಗ್ರಾಮದ ಚನ್ನರಾಜು ಎಂಬಾತ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಿರುವ ಬಗ್ಗೆ ಮಾಹಿತಿಯ ಮೇರೆಗೆ ರಾಮಾಪುರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮನೋಜ್ ಕುಮಾರ್, ಸಬ್ ಇನ್ಸ್ ಪೆಕ್ಟರ್ ಮಂಜುನಾಥ್ ಪ್ರಸಾದ್ ದಾಳಿ ನಡೆಸಿ 8.2 ಕೆ.ಜಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.