ಭದ್ರಾವತಿ : ವಿದ್ಯುತ್ ಆಘಾತಕ್ಕೆ ಯುವತಿ ಬಲಿ

Update: 2020-10-12 08:48 GMT

ಶಿವಮೊಗ್ಗ : ನೀರಿನ ಮೋಟರ್ ನಿಂದ ವಿದ್ಯುತ್ ಪ್ರವಹಿಸಿದ ಪರಿಣಾಮ ಯುವತಿಯೋರ್ವಳು ಮೃತಪಟ್ಟ ಘಟನೆ ಭದ್ರಾವತಿ ತಾಲೂಕಿನ ತಳ್ಳೀಕಟ್ಟೆ ಗ್ರಾಮದಲ್ಲಿ ನಡೆದಿದೆ.

ಮೃತ ಯುವತಿಯನ್ನು ಬಿಂದು (18) ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ ಎಂದಿನಂತೆ ನಲ್ಲಿಯಲ್ಲಿ ಬರುವ ಕುಡಿಯುವ ನೀರನ್ನು ತುಂಬಿಸಿಕೊಳ್ಳುವ ಸಲುವಾಗಿ ನಲ್ಲಿಗೆ ಅಳವಡಿಸಲಾಗಿದ್ದ ವಿದ್ಯುತ್ ಮೋಟಾರು ವೈರಿನ ಪಿನ್ ಜೋಡಿಸಲು ಹೋದ ಬಿಂದುವಿಗೆ ಕರೆಂಟ್ ಶಾಕ್ ಹೊಡೆದಿದೆ. ಆಕೆಯ ಕಿರುಚಾಟದ ಶಬ್ದ ಕೇಳಿ ಮನೆಯೊಳಗಿದ್ದ ಆಕೆಯ ಅಜ್ಜಿ ಹಾಗೂ ತಾಯಿ ಹೊರಬಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಆಸ್ಪತ್ರೆಗೆ ಸಾಗಿಸಿದ್ದು, ದಾರಿ ಮಧ್ಯೆ ಆಕೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಬಿಂದು ಶಿವಮೊಗ್ಗದ ಸರ್ಕಾರಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ತಾಯಿ ಆಶಾ ಕಾರ್ಯಕರ್ತೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News