ಸಚಿವ ಎಚ್.ನಾಗೇಶ್ ಆಪ್ತ ಕಾರ್ಯದರ್ಶಿ ನಿಧನ

Update: 2020-10-12 12:12 GMT

ಬೆಂಗಳೂರು, ಅ.12: ಅಬಕಾರಿ ಸಚಿವ ಎಚ್. ನಾಗೇಶ್ ಅವರ ಆಪ್ತ ಕಾರ್ಯದರ್ಶಿ ದೇವರಾಜ್ ಯಾದವ್(65) ನಿಧನರಾಗಿದ್ದಾರೆ.

ತುಮಕೂರು ಮೂಲದ ದೇವರಾಜ್ ಯಾದವ್ ಮೀನುಗಾರಿಕೆ ಇಲಾಖೆಯಲ್ಲಿ ಜಂಟಿ ನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. 2012ರಲ್ಲಿ ಅಂದಿನ ಸಣ್ಣ ಕೈಗಾರಿಕಾ ಸಚಿವ ರಾಜುಗೌಡ ಅವರಿಗೆ ಆಪ್ತ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದ ಇವರು ಸದ್ಯ ಅಬಕಾರಿ ಸಚಿವ ನಾಗೇಶ್ ಅವರಿಗೆ ಆಪ್ತ ಕಾರ್ಯದರ್ಶಿಯಾಗಿದ್ದರು.

ಬೆಂಗಳೂರಿನ ನಾಗವಾರದಲ್ಲಿ ನೆಲೆಸಿದ್ದ ಇವರು, ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮೃತರ ಅಂತ್ಯಕ್ರಿಯೆಯನ್ನು ಸೋಮವಾರ ಹೆಬ್ಬಾಳದ ರುದ್ರಭೂಮಿಯಲ್ಲಿ ನೆರವೇರಿಸಲಾಯಿತು. ಇವರ ನಿಧನಕ್ಕೆ ಸಚಿವ ನಾಗೇಶ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News