ಪಂಚಮಸಾಲಿ ಸಮಾಜವನ್ನು ಪ್ರವರ್ಗ 2ಎಗೆ ಸೇರಿಸಲು ಆಗ್ರಹಿಸಿ ಉಪವಾಸ ಸತ್ಯಾಗ್ರಹ: ಜಯಮೃತ್ಯುಂಜಯ ಸ್ವಾಮೀಜಿ

Update: 2020-10-12 12:58 GMT

ದಾವಣಗೆರೆ, ಅ.12: ಪಂಚಮಸಾಲಿ ಸಮಾಜವನ್ನು ಪ್ರವರ್ಗ 2ಎಗೆ ಸೇರಿಸುವಂತೆ ಆಗ್ರಹಿಸಿ ಇದೇ 28 ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಬೆಳಗಾವಿ ಸುವರ್ಣ ಸೌಧದ ಮುಂದೆ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಕೂಡಲ ಸಂಗಮದ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರ ನಮ್ಮ ಸಮಾಜವನ್ನು ಕೇಂದ್ರದಲ್ಲಿ ಓಬಿಸಿ ಪಟ್ಟಿಗೆ ಸೇರಿಸಬೇಕು. ರಾಜ್ಯದಲ್ಲಿ ಪ್ರವರ್ಗ 2ಎಗೆ ಸೇರಿಸುವಂತೆ ಹೋರಾಟ ನಡೆಸುತ್ತೇವೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ನಮ್ಮ ಸಮಾಜ ಮುಂದೆ ಬರಲು ಇದು ಅವಶ್ಯಕವಾಗಿದೆ. ಅಲ್ಲದೇ ಪ್ರತ್ಯೇಕ ಪಂಚಮಸಾಲಿ ಅಭಿವೃದ್ದಿ ನಿಗಮ ಸಹ ಮಾಡಬೇಕು ಎಂದು ಆಗ್ರಹಿಸಿದರು.  

ನಮ್ಮ ಸಮಾಜದ ಮೂವರಿಗೆ ಸಚಿವ ಸ್ಥಾನ ನೀಡಬೇಕಿತ್ತು. ಅದರೆ ಈ ಬಗ್ಗೆ ಮುಖ್ಯಮಂತ್ರಿಗಳು ಮೌನ ವಹಿಸಿದ್ದಾರೆ. ಸರಕಾರದಲ್ಲಿ 13 ಶಾಸಕರಿದ್ದಾರೆ. ಸಚಿವ ಸ್ಥಾನ ನೀಡುವಂತೆ ಕೇಳಿ ಕೇಳಿ ಸಾಕಾಗಿ ಹೋಗಿದೆ. ಕಳೆದ ಸರಕಾರದಲ್ಲಿ ಇಬ್ಬರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಅದರೀಗ ಸಚಿವ ಸ್ಥಾನದ ಬಗ್ಗೆ ಮಾತನಾಡುವುದಕ್ಕೂ ಬೇಸರವಾಗಿದೆ ಎಂದು ಹೇಳಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News