ಮಾಜಿ ಶಾಸಕ ಕೆ.ಮಲ್ಲಪ್ಪ ನಿಧನಕ್ಕೆ ಸಂತಾಪ

Update: 2020-10-12 17:52 GMT

ಬೆಂಗಳೂರು: ಇಂದು ನಿಧನರಾದ ಅಪ್ಪಟ ಗಾಂಧಿವಾದಿ, ಹಿರಿಯ ರಾಜಕಾರಣಿ, ಮಾಜಿ ಶಾಸಕ ಕೆ. ಮಲ್ಲಪ್ಪ ಅವರ ನಿಧನಕ್ಕೆ‌ ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಶರಣಪ್ಪ.ವಿ ಹಲಸೆ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಮಲ್ಲಪ್ಪ ಅವರು ಗಾಂಧೀಜಿಯವರ ತತ್ವ, ಆದರ್ಶಗಳನ್ನು ತಮ್ಮ ಜೀವನದುದ್ದಕ್ಕೂ ಪಾಲಿಸಿಕೊಂಡು ಬಂದಿದ್ದರು. ಸರಳ ಜೀವನ, ಉದಾತ್ತ ಚಿಂತನೆಗಳ ಮೂಲಕ ತಮ್ಮದೇಯಾದ ವಿಶಿಷ್ಟ ವ್ಯಕ್ತಿತ್ವವನ್ನು ರೂಡಿಸಿಕೊಂಡಿದ್ದರು. ಕುಸ್ತಿ ಆಟಕ್ಕೆ ಹೊಸ ಆಯಾಮ ನೀಡಿ ಸಾವಿರಾರು ಕ್ರೀಡಾಪಟುಗಳನ್ನು ತಯಾರಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಅವರ ಗರಡಿಯಲ್ಲಿ ಬೆಳೆದ ನೂರಾರು ಯುವಕರು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಂಡಿದ್ದಾರೆ. ಅವರ ಸಾತ್ವಿಕ ಜೀವನ ಶೈಲಿ ಮೂಲಕ ಎಲ್ಲರಿಗೂ ಮಾದರಿಯಾಗಿದ್ದರು. ಅವರ ನಿಧನದಿಂದ ಹಿರಿಯ ಚೇತನವನ್ನು ಕಳೆದುಕೊಂಡಂತಾಗಿದೆ. ಅಲ್ಲದೆ ಗಾಂಧಿಯವರ ತತ್ವ ಪಾಲನೆಯ ಮಾರ್ಗದರ್ಶನ ನೀಡುತ್ತಿದ್ದ ಕೊಂಡಿ ಕಳಚಿದಂತಾಗಿದೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News