ದ.ಕ. ಜಿಲ್ಲಾಧಿಕಾರಿಗೆ ಕೋವಿಡ್ ಸೋಂಕು ದೃಢ
Update: 2020-10-13 12:06 GMT
ಮಂಗಳೂರು, ಅ.13: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರಿಗೆ ಕೋವಿಡ್-19 ಸೋಂಕು ತಗಲಿರುವುದು ಮಂಗಳವಾರ ದೃಢಪಟ್ಟಿದೆ.
ಜಿಲ್ಲಾಧಿಕಾರಿಯಲ್ಲಿ ಯಾವುದೇ ರೋಗದ ಲಕ್ಷಣಗಳು ಕಂಡುಬಂದಿಲ್ಲ. ಸೋಂಕಿಗೆ ಪಾಸಿಟಿವ್ ಆಗಿರುವ ಹಿನ್ನೆಲೆಯಲ್ಲಿ ಅವರು ಮನೆಯಲ್ಲೇ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ಕೋವಿಡ್ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಸ್ವಯಂ ಆಗಿ ಹೋಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ.