ಬೈಕ್ ಕಳವು ಆರೋಪ: ಇಬ್ಬರ ಬಂಧನ

Update: 2020-10-13 11:10 GMT

ಬೆಂಗಳೂರು, ಅ.13: ನಗರದೆಲ್ಲೆಡೆ ಬೈಕ್‍ಗಳನ್ನು ಕಳವು ಮಾಡುತ್ತಿದ್ದ ಆರೋಪದಡಿ ಇಬ್ಬರು ಯುವಕರನ್ನು ಇಲ್ಲಿನ ಬೊಮ್ಮನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

ನಗರದ ನಿವಾಸಿಗಳಾದ ಸತೀಶ, ಮಣಿಕಂಠ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು, ಲಾಕ್‍ಡೌನ್ ಸಂದರ್ಭ ಬೈಕ್ ಕಳ್ಳತನ ಮಾಡುತ್ತಿದ್ದರು. ಈ ಮಾಹಿತಿ ಸಂಗ್ರಹಿಸಿದ ಪೊಲೀಸರು, ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಹಲವು ಬೈಕ್‍ಗಳನ್ನು ಜಪ್ತಿ ಮಾಡಿ, ತನಿಖೆ ಮುಂದುವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News