ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ಶಿಕ್ಷಕಿ ಆತ್ಮಹತ್ಯೆ

Update: 2020-10-13 12:22 GMT

ದಾವಣಗೆರೆ, ಅ.13: ಮನೆ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಪತಿಯೊಂದಿಗೆ ಜಗಳವಾಡಿದ ಶಾಲಾ ಶಿಕ್ಷಕಿಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಜಯನಗರ ನಿವಾಸಿ ಶ್ರೀದೇವಿ(38) ಎಂಬವರು ತನ್ನ ಇಬ್ಬರು ಮಕ್ಕಳಾದ ಅನುಷಾ (10) ನೂತನ್ (08) ನನ್ನು ಸೊಂಟಕ್ಕೆ ಕಟ್ಟಿಕೊಂಡು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮೃತ ಶ್ರೀದೇವಿ ಜಯನಗರ ನಿವಾಸಿಯಾಗಿದ್ದು, ನಗರದಲ್ಲಿ ಪ್ರೌಢಶಾಲಾ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಪತಿಯೊಂದಿಗೆ ಜಗಳವಾಡಿದ ಬಳಿಕ ಮಕ್ಕಳನ್ನು ಬೈಕ್‍ನಲ್ಲಿ ಕರೆದುಕೊಂಡು ಬಂದ ಶ್ರೀದೇವಿ, ನಗರದ ಹೊರವಲಯದ ಎಚ್.ಕಲ್ಪನಹಳ್ಳಿ ಬಳಿ ಇರುವ ತುಂಗಭದ್ರ ಕಾಲುವೆ ಬಳಿ ಮಕ್ಕಳೊಂದಿಗೆ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News