ದಲಿತ ಬಾಲಕಿಯರಿಬ್ಬರಿಗೆ ಲೈಂಗಿಕ ಕಿರುಕುಳ ಆರೋಪ: ಓರ್ವನ ಬಂಧನ

Update: 2020-10-13 16:26 GMT
ಪ್ರದೀಪ್ ಶೆಟ್ಟಿ

ಹಿರಿಯಡ್ಕ, ಅ.13: ಎರಡು ತಿಂಗಳ ಹಿಂದೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಇಬ್ಬರು ದಲಿತ ಬಾಲಕಿಯ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು ಪೊಲೀಸರು ಪೋಕ್ಸೊ ಕಾಯಿದೆಯಡಿ ಅ.12ರಂದು ಮಂಗಳೂರಿನಲ್ಲಿ ಬಂಧಿಸಿದ್ದಾರೆ. ಬೈರಂಪಳ್ಳಿಯ ನಿವಾಸಿ ಪ್ರದೀಪ್ ಶೆಟ್ಟಿ(39) ಬಂಧಿತ ಆರೋಪಿ. 

ಬಾಲಕಿಯರ ಮನೆ ಸಮೀಪ ನಡೆಯುತ್ತಿದ್ದ ರಸ್ತೆ ಕಾಮಗಾರಿಯ ಸುಪರ್‌ವೈಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಈತ, ಆ.24ರಂದು ಮಧ್ಯಾಹ್ನ ವೇಳೆ ಮನೆ ಯಲ್ಲಿದ್ದ ಅಪ್ರಾಪ್ತ ವಯಸ್ಸಿನ ಇಬ್ಬರು ಬಾಲಕಿರಿಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದನು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗಾಗಿ ಉಡುಪಿ ಡಿವೈಎಸ್ಪಿ ಜೈಶಂಕರ್ ನೇತೃತ್ವದಲ್ಲಿ ಮೂರು ವಿಶೇಷ ತಂಡವನ್ನು ರಚಿಸಲಾಗಿತ್ತು.

ಆರೋಪಿ ಪ್ರದೀಪ್ ಶೆಟ್ಟಿ ವಿರುದ್ಧ 2018ರಲ್ಲಿ ಹಿರಿಯಡ್ಕ ಠಾಣೆಯಲ್ಲಿ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.

ಈ ಕಾರ್ಯಾಚರಣೆಯಲ್ಲಿ ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತಪದ್ಮನಾಭ, ಡಿಸಿಐಬಿ ನಿರೀಕ್ಷಕ ಮಂಜಪ್ಪ, ಬ್ರಹ್ಮಾವರ ಎಸ್ಸೈ ರಾಘವೇಂದ್ರ, ಹಿರಿಯಡ್ಕ ಎಸ್ಸೈ ಸುಧಾಕರ್ ತೋನ್ಸೆ, ಕಾರ್ಕಳ ನಗರ ಎಸ್ಸೈ ಮಧು ಬಿ.ಇ., ಎಎಸ್ಸೈಗಳಾದ ಯೋಗೀಶ್, ಜಯಂತ್, ಸಿಬ್ಬಂದಿ ಗಳಾದ ವೆಂಕಟರಮಣ, ಚಂದ್ರ ಶೆಟ್ಟಿ, ರತ್ನಾಕರ ಶೆಟ್ಟಿ, ಲೋಕೇಶ್, ಪ್ರವೀಣ್ ಶೆಟ್ಟಿಗಾರ್, ಶಾಂತರಾಮ, ಅಣ್ಣಪ್ಪ, ಆನಂದ, ಶೇಖರ್ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News