ಕ್ಯಾಪ್ಟನ್ ರಾಜಾರಾವ್ ರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಸಚಿವರಿಗೆ ಇಂಜಿನಿಯರ್ ಗಳ ಮನವಿ

Update: 2020-10-13 14:45 GMT

ಬೆಂಗಳೂರು, ಅ.13: ರಾಜ್ಯದ ಪ್ರಖ್ಯಾತ ಮುಖ್ಯ ಅಭಿಯಂತರ (ನಿವೃತ್ತ) ಕ್ಯಾಪ್ಟನ್ ರಾಜಾರಾವ್ ಅವರಿಗೆ ಈ ಬಾರಿಯ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವಂತೆ ಜಲಸಂಪನ್ಮೂಲ ಇಂಜಿನಿಯರ್ ಗಳ ಸಂಘವು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿಗೆ ಮನವಿ ಮಾಡಿದೆ.

ಮಂಗಳವಾರ ವಿಧಾನಸೌಧದಲ್ಲಿ ರಮೇಶ್ ಜಾರಕಿಹೊಳಿಯನ್ನು ಭೇಟಿ ಮಾಡಿದ ಅಭಿಯಂತರರು, ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ತಾಂತ್ರಿಕ ಕ್ಷೇತ್ರವನ್ನೂ ಪರಿಗಣಿಸುವಂತೆ ಒತ್ತಾಯಿಸಿದರು.

ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಅಭಿಯಂತರರು ಸದಾ ಶ್ರಮಿಸುತ್ತಿರುವುದನ್ನು ನಾನು ಗಮನಿಸಿದ್ದೇನೆ. 6 ದಶಕಗಳ ಕಾಲ ರಾಜಾರಾವ್ ಸಲ್ಲಿಸಿರುವ ಸೇವೆ ನಮಗೆಲ್ಲ ಮಾದರಿ. ಹಾಗಾಗಿ ಈ ಕೂಡಲೇ ಮುಖ್ಯಮಂತ್ರಿಗಳಿಗೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವರಿಗೆ ಈ ಕುರಿತು ಮಾತನಾಡಿ, ತಾಂತ್ರಿಕ ಕ್ಷೇತ್ರದಲ್ಲಿ ಮಾಡಿರುವ ಸಾಧನೆ ಗಮನಿಸಿ ಕ್ಯಾಪ್ಟನ್ ಎಸ್.ರಾಜಾರಾವ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಶಿಫಾರಸ್ಸು ಮಾಡುತ್ತೇನೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News