ಮಂಗಳೂರು: ಅತಿಯಾಗಿ ಮೊಬೈಲ್ ಬಳಕೆ ಬೇಡ ಎಂದು ಬುದ್ದಿವಾದ ಹೇಳಿದ್ದಕ್ಕೆ ಬಾಲಕಿ ಆತ್ಮಹತ್ಯೆ
Update: 2020-10-13 15:08 GMT
ಮಂಗಳೂರು, ಅ.13: ಅತಿಯಾಗಿ ಮೊಬೈಲ್ ಬಳಕೆ ಮಾಡಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ಬಾಲಕಿ ಆತ್ಮಹತ್ಯೆಗೈದ ಘಟನೆ ಕುಳಾಯಿಯಲ್ಲಿ ನಡೆದಿದೆ. ಕುಳಾಯಿಯ ಗೋಕುಲನಗರದ ಸುಜೇತಾ (16) ಆತ್ಮಹತ್ಯೆ ಮಾಡಿಕೊಂಡ ಬಾಲಕಿ.
ಬಾಲಕಿಯು ಸುರತ್ಕಲ್ನ ಖಾಸಗಿ ಪ್ರೌಢಶಾಲೆಯಲ್ಲಿ ಎಸೆಸೆಲ್ಸಿ ವಿದ್ಯಾರ್ಥಿನಿ. ಈಕೆ ಮೊಬೈಲ್ನಲ್ಲೇ ಹೆಚ್ಚು ಸಮಯ ಕಳೆಯುತ್ತಿದ್ದುದನ್ನು ಅರಿತ ತಾಯಿಯು ಸೋಮವಾರ ಸಂಜೆ ಬುದ್ದಿಮಾತು ಹೇಳಿದ್ದಾರೆ. ಇದರಿಂದ ಬೇಸರಗೊಂಡ ಬಾಲಕಿಯು ಫ್ಯಾನ್ಗೆ ಸೀರೆ ಬಳಸಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮನೆಯಲ್ಲಿದ್ದ ತಾಯಿಯು ಟೆರೇಸ್ ಮೇಲೆ ತೆರಳಿ ವಾಪಸಾಗುವಷ್ಟರಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಈ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.