ಹತ್ರಸ್: ಘಟನಾ ಸ್ಥಳಕ್ಕೆ ಸಿಬಿಐ ತಂಡ ಭೇಟಿ

Update: 2020-10-13 16:51 GMT

 ಹೊಸದಿಲ್ಲಿ,ಅ.13: ಉತ್ತರ ಪ್ರದೇಶದ ಹತ್ರಸ್ ‌ನಲ್ಲಿ ಸೆ.14ರಂದು ಸಾಮೂಹಿಕ ಅತ್ಯಾಚಾರ ನಡೆದ ಸ್ಥಳಕ್ಕೆ ಸಿಬಿಐ ಅಧಿಕಾರಿಗಳ ತಂಡವು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಸ್ಥಳವನ್ನು ಗುರುತಿಸಲು ಅತ್ಯಾಚಾರಕ್ಕೊಳಗಾಗಿದ್ದ ಯುವತಿಯ ಸೋದರನನ್ನು ಕರೆಸಿಕೊಂಡಿದ್ದ ತಂಡವು ಪ್ರದೇಶದಲ್ಲಿ ಸಂಚಾರವನ್ನು ನಿರ್ಬಂಧಿಸುವಂತೆ ಸ್ಥಳೀಯ ಪೊಲೀಸರಿಗೆ ನಿರ್ದೇಶ ನೀಡಿತ್ತು.

 ಅಪರಾಧ ದೃಶ್ಯವನ್ನು ಮರುರೂಪಿಸಲು ತಂಡವು ಕೇಂದ್ರ ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರೊಂದಿಗೆ ಸ್ಥಳಕ್ಕೆ ಮರಳುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದರು.

 ಅತ್ಯಾಚಾರಕ್ಕೊಳಗಾದ ದಲಿತ ಯುವತಿಯು ತೀವ್ರ ಗಾಯಗಳಿಂದಾಗಿ ಸೆ.29ರಂದು ದಿಲ್ಲಿಯ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಳು.

ಘಟನೆಯ ಬಗ್ಗೆ ಉ.ಪ್ರದೇಶ ಸರಕಾರದ ಘೋರ ನಿರ್ಲಕ್ಷ್ಯವನ್ನು ಪ್ರತಿಪಕ್ಷಗಳು ಬೃಹತ್ ಪ್ರತಿಭಟನೆಗಳನ್ನು ನಡೆಸಿದ ಬಳಿಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News