ಬೆತ್ತಲೆ ಫೋಟೋಗಾಗಿ ಕಿರುಕುಳ ಆರೋಪ: ಯುವಕ ಸೆರೆ

Update: 2020-10-13 16:21 GMT

ಬೆಂಗಳೂರು, ಅ.13: ಅಪ್ರಾಪ್ತ ಹೆಣ್ಣು ಮಕ್ಕಳನ್ನು ಫೋನ್ ಮೂಲಕ ಸಂಪರ್ಕಿಸಿ ಬೆತ್ತಲೆ ಫೋಟೋ ಕಳಿಸುವಂತೆ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಯುವಕನೋರ್ವನನ್ನು ಇಲ್ಲಿನ ವೈಟ್ ಫೀಲ್ಡ್ ವಿಭಾಗದ ಸೈಬರ್ ಕ್ರೈಂ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಕಾಡುಗೋಡಿ ನಿವಾಸಿ ಜಗದೀಶ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

ಜಗದೀಶ್ ಅಪ್ರಾಪ್ತ ಹೆಣ್ಣು ಮಕ್ಕಳನ್ನು ಗುರಿಯಾಗಿಸಿಕೊಂಡು, ಬೇರೆಯವರ ಹೆಸರಿಲ್ಲಿ ನಕಲಿ ಇನ್‍ಸ್ಟಾಗ್ರಾಂ ಖಾತೆ ತೆರೆದು ಚಾಟಿಂಗ್ ಮಾಡುತ್ತಿದ್ದ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದ್ದು, ಈತನಿಂದ ಮೊಬೈಲ್ ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News