ರಾಜ್ಯಪಾಲರನ್ನು ಭೇಟಿಯಾದ ಸಚಿವ ಡಾ.ಕೆ.ಸುಧಾಕರ್

Update: 2020-10-13 16:28 GMT

ಬೆಂಗಳೂರು, ಅ.13: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಂಗಳವಾರ ಸಂಜೆ ರಾಜ್ಯಪಾಲ ವಜುಭಾಯ್ ವಾಲ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿದರು.

ಈ ವೇಳೆ ರಾಜ್ಯದಲ್ಲಿನ ಕೋವಿಡ್ ಸ್ಥಿತಿಗತಿ, ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು, ನವರಾತ್ರಿ, ದಸರಾ ಮಹೋತ್ಸವ ಆಚರಣೆ ಹಿನ್ನೆಲೆಯಲ್ಲಿ ಕೈಗೊಂಡಿರುವ ಸುರಕ್ಷತಾ ಕ್ರಮಗಳು, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಬೆಳ್ಳಿಹಬ್ಬದ ವರ್ಷದಲ್ಲಿ ರೂಪಿಸಿರುವ ಕಾರ್ಯಕ್ರಮಗಳು ಹಾಗೂ ಇತರೆ ವಿಷಯಗಳ ಬಗ್ಗೆ ಚರ್ಚಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News