ಮಂಗಳೂರು: ಮೇಯರ್ ನೇತೃತ್ವದಲ್ಲಿ ಮಾಂಸದಂಗಡಿಗಳ ಪರಿಶೀಲನೆ

Update: 2020-10-14 06:48 GMT

ಮಂಗಳೂರು, ಅ.14: ಮೇಯರ್ ದಿವಾಕರ್ ನೇತೃತ್ವದ ಮನಪಾ ಅಧಿಕಾರಿಗಳ ತಂಡ ಬುಧವಾರ ಬೆಳಗ್ಗೆ ನಗರದ ಕೆಲವು ಮಾಂಸದಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಮಾಂಸ ಮಾರಾಟಕ್ಕೆ ಸಂಬಂಧಿಸಿ ಮಂಗಳೂರು ಮಹಾನಗರ ಪಾಲಿಕೆಗೆ ಸಾರ್ವಜನಿಕರ ದೂರಿನ ಹಿನ್ನೆಲೆ ಹಾಗೂ ಅನಧಿಕೃತವಾಗಿ ಜಾನುವಾರು ಸಾಗಾಟ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಉರ್ವಸ್ಟೋರ್, ಉರ್ವ ಮಾರ್ಕೆಟ್, ಕಸಾಯಿಖಾನೆ ಮುಂತಾದೆಡೆ ಮಾಂಸದ ಅಂಗಡಿಗಳನ್ನು ಪರಿಶೀಲಿಸಲಾಯಿತು. ಅಕ್ರಮವಾಗಿ ಮಾಂಸ ಮಾರಾಟ ಕಂಡುಬಂದಲ್ಲಿ ಪರವಾನಿಗೆ ರದ್ದು ಮಾಡುವುದಾಗಿ ಮೇಯರ್ ಎಚ್ಚರಿಸಿದರು.

ಈ ಸಂದರ್ಭ ಮನಪಾದ ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರಾದ ಪೂರ್ಣಿಮಾ, ಕಿರಣ್ ಕುಮಾರ್, ಮನಪಾ ಸದ್ಯಸ ಸುಧೀರ್ ಶೆಟ್ಟಿ ಹಾಗೂ ಮನಪಾ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News