ಕೊರೋನ ಭೀತಿ : ಪುತ್ತೂರು ದಸರಾ ನಾಡಹಬ್ಬ ರದ್ದು

Update: 2020-10-15 08:07 GMT

ಪುತ್ತೂರು : ಡಾ. ಶಿವರಾಮ ಕಾರಂತರು 1931ರಲ್ಲಿ ಪುತ್ತೂರಿನಲ್ಲಿ ಪ್ರಾರಂಭಿಸಿದ್ದ ಸಾಂಸ್ಕೃತಿಕ ಉತ್ಸವ 'ಪುತ್ತೂರು ದಸರಾ ನಾಡಹಬ್ಬ'ವನ್ನು ಕೋವಿಡ್-19 ಹಿನ್ನಲೆಯಲ್ಲಿ ಈ ವರ್ಷ ರದ್ದುಗೊಲಿಸಲಾಗಿದೆ ಎಂದು ಪುತ್ತೂರು ದಸರಾ ನಾಡಹಬ್ಬ ಸಮಿತಿ ಅಧ್ಯಕ್ಷ ವಾಟೆಡ್ಕ ಕೃಷ್ಣ ಭಟ್ ಅವರು ತಿಳಿಸಿದ್ದಾರೆ.

ಕಳೆದ 67 ವರ್ಷಗಳ ಹಿಂದೆ ಡಾ. ಶಿವರಾಮ ಕಾರಂತರು ಆರಂಭಿಸಿದ್ದ ಈ ದಸರಾ ನಾಡ ಹಬ್ಬವು ಪುತ್ತೂರು ಮಹೋತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯಲ್ಲಿ ನಡೆಯುತ್ತಿತ್ತು. ಈ ವರ್ಷ ಕೊರೋನ ಭೀತಿ ಇರುವ ಹಿನ್ನೆಲೆಯಲ್ಲಿ ಮುಂಜಾರೂಕತೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ಕಾರ್ಯಕ್ರಮ ರದ್ದುಗೊಳಿಸಲಾಗಿದ್ದು, ಮುಂದಿನ ವರ್ಷ ನಡೆಸುವುದೆಂದು ನಾಡಹನ್ನ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News