ಕುಸುಮಾ ವಿರುದ್ಧ ಎಫ್‍ಐಆರ್ ಪ್ರಕರಣ: ಕಾನೂನು ಎಲ್ಲರಿಗೂ ಒಂದೇ- ಗೃಹ ಸಚಿವ ಬೊಮ್ಮಾಯಿ

Update: 2020-10-15 12:53 GMT

ಬೆಂಗಳೂರು, ಅ.15: ಚುನಾವಣೆ ಪ್ರಕ್ರಿಯೆಯ ನೀತಿ ಸಂಹಿತೆ ಎಲ್ಲರಿಗೂ ಒಂದೇ ಆಗಿದ್ದು, ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಪ್ರಕರಣ ದಾಖಲು ಮಾಡಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಆರ್‍ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ಮೇಲಿನ ಎಫ್‍ಐಆರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಕಾನೂನು ಎಲ್ಲರಿಗೂ ಒಂದೇ ಎನ್ನುವುದನ್ನು ಮರೆಯಬಾರದು. ಚುನಾವಣಾ ನೀತಿ ಸಂಹಿತೆ ಇದ್ದು, ಅದನ್ನು ಎಲ್ಲರೂ ಪಾಲನೆ ಮಾಡಬೇಕು. ಯಾರು ಪಾಲನೆ ಮಾಡುವುದಿಲ್ಲವೋ ಅವರ ವಿರುದ್ಧ ನೀತಿ ಸಂಹಿತೆ ಪ್ರಕಾರ ಪ್ರಕರಣ ದಾಖಲಿಸುತ್ತಾರೆ ಎಂದು ತಿಳಿಸಿದರು.

ಬಿಜೆಪಿ ಕಾರ್ಯಕರ್ತರ ವಿರುದ್ಧ ಮುನಿರತ್ನ ಅವರು ಈ ಹಿಂದೆ ಪ್ರಕರಣ ದಾಖಲಿಸಿದ್ದ ವಿಚಾರ ಎಲ್ಲವೂ ನಮ್ಮ ಗಮನದಲ್ಲಿದೆ. ಅದರ ಹಿನ್ನೆಲೆ ಏನು, ಬೇರೆ ಬೇರೆ ಪಕ್ಷದಲ್ಲಿ ಇದ್ದಾಗ ಏನಾಗಿತ್ತು, ಅದೆಲ್ಲವನ್ನೂ ಸರಿ ಮಾಡುವ ಪ್ರಯತ್ನ ಮಾಡುತ್ತೇವೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News