ರೋಚಕ ಹಣಾಹಣಿಯಲ್ಲಿ ಆರ್‌ಸಿಬಿಗೆ ಸೋಲುಣಿಸಿದ ಕಿಂಗ್ಸ್ ಪಂಜಾಬ್

Update: 2020-10-15 17:40 GMT

ಶಾರ್ಜಾ: ನಾಯಕ ಕೆ.ಎಲ್ ರಾಹುಲ್ ಹಾಗೂ ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಲ್ ಬಾರಿಸಿದ ಅರ್ಧಶತಕಗಳ ನೆರವಿನಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 8 ವಿಕೆಟ್ ಗಳ ಜಯಗಳಿಸಿದೆ.

ಗೆಲುವಿಗೆ 172 ರನ್ ಗಳ ಗುರಿ ಪಡೆದ ಪಂಜಾಬ್ ಕೊನೆಯ ಎಸೆತದಲ್ಲಿ ಗೆಲುವಿನ ದಡ ಸೇರಿತು. ಆರಂಭಿಕ ಆಟಗಾರ ಮಯಾಂಕ್ ಅಗರವಾಲ್ 45(25 ಎಸೆತ), ನಾಯಕ ಕೆ.ಎಲ್ ರಾಹುಲ್ 49 ಎಸೆತಗಳಲ್ಲಿ 61 ಹಾಗೂ ಕ್ರಿಸ್ ಗೇಲ್ 45 ಎಸೆತಗಳಲ್ಲಿ 53 ರನ್ ಸಿಡಿಸಿದರು.

ಬೆಂಗಳೂರು ಪರ ಯುಝುವೇಂದ್ರ ಚಾಹಲ್ ಒಂದು ವಿಕೆಟ್ ಪಡೆದರು. 

ಇದಕ್ಕೂ ಮೊದಲು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಿಗದಿತ 20 ಓವರ್ ಗಳಲ್ಲಿ 171-6 ರನ್ ಗಳಿಸಿತ್ತು. ನಾಯಕ ವಿರಾಟ್ ಕೊಹ್ಲಿ 39 ಎಸೆತಗಳಲ್ಲಿ 48 ರನ್ ಬಾರಿಸಿದರು.

ಫಿಂಚ್ 20, ಶಿವಮ್ ದುಬೆ 23 ಹಾಗೂ ಕೊನೆಯಲ್ಲಿ ಕ್ರಿಸ್ ಮೋರಿಸ್ ಕೇವಲ 8 ಎಸೆತಗಳಲ್ಲಿ 25 ರನ್ ಸಿಡಿಸಿದರು.

ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಮುಹಮ್ಮದ್ ಶಮಿ ಹಾಗೂ ಮುರುಗನ್ ಅಶ್ವಿನ್ ತಲಾ 2 ವಿಕೆಟ್ ಪಡೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News