ಕೊರೋನ ಸೋಂಕು : ಚಿಕಿತ್ಸೆ ಫಲಕಾರಿಯಾಗದೆ ಮೂಡುಬಿದಿರೆ ಶಿಕ್ಷಕಿ ನಿಧನ

Update: 2020-10-16 10:15 GMT

ಮೂಡುಬಿದಿರೆ: ಕೊರೋನ ಸೋಂಕಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂಡುಬಿದಿರೆ ಶಿಕ್ಷಕಿ ಪದ್ಮಾಕ್ಷಿ ಇಂದು ಮೃತಪಟ್ಟಿದ್ದಾರೆ.

ವಿದ್ಯಾಗಮ ಯೋಜನೆಯಡಿ ಪಾಠ ಮಾಡಲು ಮಕ್ಕಳ ಬಳಿಗೆ ಹೋಗುತ್ತಿದ್ದ ಶಿಕ್ಷಕಿಗೆ ಸೆ. 29ರಂದು ಕೋವಿಡ್-19 ದೃಢಪಟ್ಟು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಶಿಕ್ಷಕಿಗೆ ಎರಡನೇ ಹಂತದ ಪರೀಕ್ಷೆಯಲ್ಲಿ ಕೋವಿಡ್ ನೆಗೆಟಿವ್ ಬಂದಿತ್ತು. ತಾಯಿಯ ಚಿಕಿತ್ಸೆಗೆ ಸಹಕರಿಸುವಂತೆ ಕೋರಿ ಪುತ್ರಿ ಐಶ್ವರ್ಯಾ ಫೇಸ್ ಬುಕ್ ನಲ್ಲಿ ಮಾಡಿಕೊಂಡ ಮನವಿಗೆ ಸ್ಪಂದಿಸಿದ್ದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಹೇಳಿದ್ದರು. ಆದರೆ ಕೋವಿಡ್ ನೆಗೆಟಿವ್ ಎಂದು ಕಂಡುಬಂದಿದ್ದರೂ ಪದ್ಮಾಕ್ಷಿ ಅವರ ಆರೋಗ್ಯಸ್ಥಿತಿ ಗುರುವಾರ  ವಿಷಮಿಸತೊಡಗಿದ ಕಾರಣ ಪತಿ, ಪುತ್ರಿ ಐಶ್ವರ್ಯ ಅವರು ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯ ಅಧಿಕಾರಿಗಳೊಂದಿಗೆ ಚರ್ಚಿಸಿ ಹೆಚ್ಚಿನ ಚಿಕಿತ್ಸೆಗಾಗಿ  ಬೆಂಗಳೂರಿಗೆ ಒಯ್ಯಲು ಸಿದ್ಧತೆ ನಡೆಸಿದ್ದರು.

ಕೊರೋನ ಸೋಂಕಿನ ಬಳಿಕ ಅಸ್ವಸ್ಥರಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಿಕ್ಷಕಿ ಪದ್ಮಾಕ್ಷಿ ಜೈನ್ ಶುಕ್ರವಾರ ನಿಧನರಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News