×
Ad

ಉಡುಪಿ : 211 ಮಂದಿಯಲ್ಲಿ ಕೊರೋನ ಸೋಂಕು ಪತ್ತೆ, ಇಬ್ಬರು ಮೃತ್ಯು

Update: 2020-10-16 20:29 IST

ಉಡುಪಿ, ಅ.16: ಜಿಲ್ಲೆಯಲ್ಲಿ ಶುಕ್ರವಾರ ಹೊಸದಾಗಿ 211 ಮಂದಿಯಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿದೆ. ಅದೇ ರೀತಿ ಇಂದು ಇಬ್ಬರು ಹಿರಿಯ ನಾಗರಿಕರು ಸೋಂಕಿಗೆ ಬಲಿಯಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ ಮಕ್ಕಳು ಸೇರಿದಂತೆ 101 ಮಂದಿ ಪುರುಷರು ಹಾಗೂ 110 ಮಂದಿ ಮಹಿಳೆಯರಾಗಿದ್ದಾರೆ. ಇವರಲ್ಲಿ 77 ಪುರುಷರು ಹಾಗೂ 93 ಮಂದಿ ಮಹಿಳೆಯರಲ್ಲಿ ಯಾವುದೇ ರೋಗದ ಲಕ್ಷಣಗಳು ಕಂಡುಬಂದಿಲ್ಲ. ಉಡುಪಿ ತಾಲೂಕಿನ 85, ಕುಂದಾಪುರ ತಾಲೂಕಿನ 59 ಹಾಗೂ ಕಾರ್ಕಳ ತಾಲೂಕಿನ 64 ಮಂದಿ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಮೂವರು ಹೊರಜಿಲ್ಲೆಗಳಿಂದ ಚಿಕಿತ್ಸೆಗೆಂದು ಬಂದು ಇಲ್ಲಿ ಪಾಸಿಟಿವ್ ಬಂದವರು ಎಂದು ಡಾ.ಸೂಡ ಹೇಳಿದರು.

ದಿನದಲ್ಲಿ ಪಾಸಿಟಿವ್ ಬಂದ 211 ಮಂದಿಯಲ್ಲಿ 44 ಮಂದಿಯನ್ನು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಉಳಿದ 167 ಮಂದಿ ತಮ್ಮ ತಮ್ಮ ಮನೆಗಳಲ್ಲೇ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಿಎಚ್‌ಓ ಡಾ.ಸೂಡ ವಿವರಿಸಿದರು.

255 ಗುಣಮುಖ: ದಿನದಲ್ಲಿ ಒಟ್ಟು 255 ಮಂದಿ ಸೋಂಕಿನಿಂದ ಗುಣಮುಖರಾಗಿ ಕೋವಿಡ್ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಹೀಗೆ ಸೋಂಕಿನಿಂದ ಮುಕ್ತರಾಗಿ ಮನೆಗೆ ತೆರಳಿದವರ ಒಟ್ಟು ಸಂಖ್ಯೆ ಈಗ 18,409 ಆಗಿದೆ. ಜಿಲ್ಲೆಯಲ್ಲಿ ಸದ್ಯ 1907 ಸಕ್ರೀಯ ಕೋವಿಡ್ ಸೋಂಕಿ ತರು ವಿವಿಧ ಆಸ್ಪತ್ರೆಗಳಲ್ಲಿ ಮತ್ತು ಮನೆಗಳ ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದವರು ತಿಳಿಸಿದರು.

1632 ನೆಗೆಟಿವ್: ಜಿಲ್ಲೆಯಲ್ಲಿ ಇಂದು ಒಟ್ಟು 1833 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಇವರಲ್ಲಿ 1632 ಮಂದಿ ನೆಗೆಟಿವ್ ಬಂದಿದ್ದು, 201 ಮಂದಿ ಪಾಸಿಟಿವ್ ಬಂದಿದ್ದಾರೆ. ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 20,477 ಆಗಿದೆ.

ಜಿಲ್ಲೆಯಲ್ಲಿ ಇಂದು ಒಟ್ಟು 1833 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ. ಇವರಲ್ಲಿ 1632 ಮಂದಿ ನೆಗೆಟಿವ್ ಬಂದಿದ್ದು, 201 ಮಂದಿ ಪಾಸಿಟಿವ್ ಬಂದಿದ್ದಾರೆ. ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 20,477 ಆಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಒಟ್ಟು 1,52,981 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರಲ್ಲಿ 1,32,504 ಮಂದಿ ನೆಗೆಟಿವ್ ಹಾಗೂ 20,477 ಮಂದಿ ಪಾಸಿಟಿವ್ ಬಂದಿದ್ದಾರೆ. ಇವರಲ್ಲಿ 18,409 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಈವರೆಗೆ ಒಟ್ಟು 172 ಮಂದಿ ಮೃತಪಟ್ಟಿದ್ದಾರೆ.

ಇಬ್ಬರು ಮೃತ್ಯು: ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್ ಸೋಂಕಿನಿಂದ ಉಡುಪಿ ಮತ್ತು ಕಾರ್ಕಳ ತಾಲೂಕುಗಳ 66 ಮತ್ತು 75 ವರ್ಷ ಪ್ರಾಯದ ಹಿರಿಯ ನಾಗರಿಕರು ಮೃತಪಟ್ಟಿದ್ದಾರೆ. ಇದರಿಂದ ಈವರೆಗೆ ಕೊರೋನಕ್ಕೆ ಬಲಿಯಾದವರ ಸಂಖ್ಯೆ 172 ಆಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ದೈನಂದಿನ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News