ಅ.18ರಂದು ಇಂದ್ರಾಣಿ ಅತಿಥಿಗೃಹದ ಉದ್ಘಾಟನೆ
Update: 2020-10-16 20:41 IST
ಉಡುಪಿ, ಅ.16: ಇಂದ್ರಾಳಿಯ ಇಂದ್ರಾಣಿ ಶ್ರೀಪಂಚದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತಜನರ ಅನುಕೂಲಕ್ಕಾಗಿ ದಾನಿಗಳ ಸಹಯೋಗದೊಂದಿಗೆ ನೂತನವಾಗಿ ನಿರ್ಮಾಣವಾದ ಇಂದ್ರಾಣಿ ಅತಿಥಿಗೃಹದ ಉದ್ಘಾಟನಾ ಸಮಾರಂಭವು ಅ.18ರಂದು ಬೆಳಗ್ಗೆ 10:30ಕ್ಕೆ ನಡೆಯಲಿದೆ.
ಕಾರ್ಯಕ್ರಮದಲ್ಲಿ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಕೆ.ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಭಾಗವಹಿಸಲಿರುವರು ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.