ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2020-10-16 15:59 GMT

ಉಡುಪಿ, ಅ.16: 76ನೆ ಬಡಗುಬೆಟ್ಟು ಗ್ರಾಮದ ಇಂದಿರಾ ನಗರದ 6ನೆ ಅಡ್ಡರಸ್ತೆಯ ನಿವಾಸಿ ಸ್ಟೀವನ್ ಪ್ರಭಾಕರ ಅಮ್ಮನ್ನ(49) ಎಂಬವರು ಮಾನಸಿಕ ಖಿನ್ನತೆಗೊಳಗಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಸೆ.16ರಂದು ಬೆಳಗ್ಗೆ ಮನೆ ಯಲ್ಲಿ ನೇಣು ಬಿಗಿದು ಆತ್ಮಹತ್ಯೆಯನ್ನು ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ರಹ್ಮಾವರ: ವಿಪರೀತ ಮದ್ಯ ಪಾನ ಮಾಡುವ ಅಭ್ಯಾಸ ಹೊಂದಿದ್ದ ಹೆಗ್ಗುಂಜೆಯ ಮೂಡು ಬಾರಾಳಿ ನಿವಾಸಿ ವಿಜಯ್ ಕುಮಾರ್ (38) ಎಂಬವರು ಕೆಲಸ ಇಲ್ಲದ ಚಿಂತೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಆ.15ರಂದು ಬೆಳಗ್ಗೆ ಮನೆಯ ಎದುರಿನ ಹಾಡಿಯಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News