ಕೆಪಿಸಿಸಿ ಪ್ಯಾನಲಿಸ್ಟ್ ಆಗಿ ಅಬ್ದುಲ್ ಮುನೀರ್ ನೇಮಕ
Update: 2020-10-16 17:53 GMT
ಬೆಂಗಳೂರು, ಅ.16: ಕೆಪಿಸಿಸಿ ನೂತನ ಪ್ಯಾನಲಿಸ್ಟ್ ಆಗಿ ಅಬ್ದುಲ್ ಮುನೀರ್ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ದೃಶ್ಯ, ಮುದ್ರಣ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳು ಸಾರ್ವಜನಿಕವಾಗಿ ಮಹತ್ವದ ವಿಷಯಗಳ ಬಗ್ಗೆ ಚರ್ಚೆಯ ನೇತೃತ್ವ ವಹಿಸುತ್ತಿರುವುದು ಗಮನಿಸಬೇಕಾದ ವಿಷಯ. ಈ ಮಾಧ್ಯಮಗಳಲ್ಲಿ ನಮ್ಮ ವಿಚಾರ ಮತ್ತು ದೃಷ್ಟಿಕೋನ ಪರಿಣಾಮಕಾರಿಯಾಗಿ ಬಿಂಬಿತವಾಗಬೇಕಾಗಿರುವುದು ಅತ್ಯಂತ ಅವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ತಮಗಿರುವ ಅನುಭವ, ತಿಳುವಳಿಕೆಗಳೊಂದಿಗೆ ವಿಷಯವನ್ನು ಸಮರ್ಥವಾಗಿ ಮಂಡಿಸುವ ಸಾಮರ್ಥ್ಯವನ್ನು ಗಮನಿಸಿ ನಿಮ್ಮನ್ನು “ಕೆಪಿಸಿಸಿ ಪ್ಯಾನಲಿಸ್ಟ್'' ಆಗಿ ನೇಮಕ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.