ಪ್ರಮೋದ್ ಮಧ್ವರಾಜ್ ಅಭಿಮಾನಿ ಬಳಗದಿಂದ ರಕ್ತದಾನ

Update: 2020-10-17 15:54 GMT

ಮಣಿಪಾಲ, ಅ.17: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಹುಟ್ಟುಹಬ್ಬವನ್ನು ಪ್ರಮೋದ್ ಮಧ್ವರಾಜ್ ಅಭಿಮಾನಿ ಬಳಗವು ಮಣಿಪಾಲದ ಕೆಎಂಸಿ ಆಸ್ಪತ್ರೆಯ ಬ್ಲಡ್ ಬ್ಯಾಂಕಿನಲ್ಲಿ ರಕ್ತದಾನ ಮಾಡುವುದರ ಮೂಲಕ ಆಚರಿಸಿತು.

ಕಾರ್ಯಕ್ರಮಕ್ಕೆ ಪ್ರಮೋದ್ ಮಧ್ವರಾಜ್ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ, ಕಾಂಗ್ರೆಸ್ ಮುಖಂಡರಾದ ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರ ಮೊದಲಾದವರು ಉಪಸ್ಥಿತರಿದ್ದರು.

ಅದೇ ರೀತಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಜನ್ಮ ದಿನವನ್ನು ಅಭಿಮಾನಿಗಳು, ಆಟೋ ಚಾಲಕರು ಮತ್ತು ಮಾಲಕರು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮಣಿಪಾಲದ ಶ್ರೀಕ್ಷೇತ್ರ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಪೂಜೆ-ಪುನಸ್ಕಾರದೊಂದಿಗೆ ಆಚರಿಸಿದರು. ಇದೇ ಸಂದರ್ಭದಲ್ಲಿ ಪ್ರಮೋದ್ ಮಧ್ವರಾಜ್ ಅವರಿಗೆ ಮಾಜಿ ಸಚಿವರ ಕುಟುಂಬ ಸದಸ್ಯರ ಬೃಹತ್ ಗಾತ್ರದ ತೈಲಚಿತ್ರವನ್ನು ಹಸ್ತಾಂತರಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News