ದಲಿತರ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿ ಪಕ್ಷಕ್ಕಿಲ್ಲ: ಮಾಜಿ ಸಂಸದ ಆರ್. ಧ್ರುವನಾರಾಯಣ್
Update: 2020-10-17 16:16 GMT
ಮೈಸೂರು,ಅ.17: ದಲಿತರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಬಿಜೆಪಿ ಪಕ್ಷದ ನಾಯಕರುಗಳಿಗೆ ಇಲ್ಲ ಎಂದು ಮಾಜಿ ಸಂಸದ ಆರ್. ಧ್ರುವನಾರಾಯಣ್ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿಯವರು ಜಾತಿ ಜಾತಿಗಳ ನಡುವೆ ಧರ್ಮ, ಧರ್ಮಗಳ ನಡುವೆ ಕಂದಕವನ್ನು ಉಂಟುಮಾಡುವುದರಲ್ಲಿ ನಿಸ್ಸೀಮರು. ಸಿ.ಟಿ.ರವಿ ಅವರಿಗೆ ದಲಿತರು ಮತ್ತು ಅಲ್ಪಸಂಖ್ಯಾತರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದರು.
ಉತ್ತರ ಪ್ರದೇಶದ ಹತ್ರಾಸ್ನಲ್ಲಿ ದಲಿತ ಯುವತಿ ಮೇಲೆ ನಡೆದ ಅತ್ಯಾಚಾರದ ಬಗ್ಗೆ ಬಿಜೆಪಿ ಪಕ್ಷದ ರಾಷ್ಟ್ರೀಯ ಮತ್ತು ರಾಜ್ಯದ ಯಾವೊಬ್ಬ ನಾಯಕರು ಒಂದೇ ಒಂದು ಮಾತನಾಡಿಲ್ಲ. ಅಂತಹದರಲ್ಲಿ ಇವರು ದಲಿತರ ಬಗ್ಗೆ ಮಾತನಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.