ಮೀಲಾದುನ್ನಬಿ : ರಾಜ್ಯ ಸರಕಾರದಿಂದ ಮಾರ್ಗಸೂಚಿ ಬಿಡುಗಡೆ
Update: 2020-10-18 11:38 GMT
ಬೆಂಗಳೂರು : ಮೀಲಾದುನ್ನಬಿಗೆ ರಾಜ್ಯ ಸರಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಕೊರೋನ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು ಆಚರಿಸುವಂತೆ ಸೂಚಿಸಿದೆ.
ಈ ಕುರಿತಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳು ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮೀಲಾದುನ್ನಬಿ ಅಂದು ಸಾಮೂಹಿಕ ಮೆರವಣಿಗೆಗೆ ನಿಷೇಧ ಹೇರಲಾಗಿದೆ. ಪ್ರವಚನ, ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ನಿಷೇಧ ವಿಧಿಸಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಧ್ವನಿವರ್ಧಕ ಬಳಸುವಂತಿಲ್ಲ. ಮಸೀದಿಗಳಲ್ಲಿ ಕೋವಿಡ್ ನಿಯಮ ಪಾಲನೆ ಕಡ್ಡಾಯ ಎಂಬುದಾಗಿ ಮಾರ್ಗಸೂಚಿಯಲ್ಲಿ ತಿಳಿಸಿದೆ.
ನಿಮಯಗಳನ್ನು ಮೀರಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಸಿದೆ.