ಮದ್ದಳೆಯ ಮಾಂತ್ರಿಕ ಹಿರಿಯಡ್ಕ ಗೋಪಾಲ್ ರಾವ್ ಅಂತ್ಯಕ್ರಿಯೆ

Update: 2020-10-18 14:14 GMT

ಉಡುಪಿ, ಅ.18: ಶನಿವಾರ ನಿಧನರಾದ ಮದ್ದಳೆಯ ಮಾಂತ್ರಿಕ ಶತಾ ಯುಷಿಯಾಗಿದ್ದ ಹಿರಿಯಡ್ಕ ಗೋಪಾಲ್ ರಾವ್ ಅವರ ಅಂತ್ಯಕ್ರಿಯೆಯು ರವಿವಾರ ಉಡುಪಿಯ ಬೀಡಿನಗುಡ್ಡೆಯ ಸ್ಮಶಾನದಲ್ಲಿ ನೆರವೇರಿಸಲಾಯಿತು.

ಇದಕ್ಕೂ ಮುನ್ನಾ ಮೃತರ ನಿವಾಸಕ್ಕೆ ಭೇಟಿ ನೀಡಿದ ರಾಜ್ಯ ಮೀನುಗಾರಿಕೆ ಮತ್ತು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಗೋಪಾಲ ರಾವ್ ಅವರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಅದೇ ರೀತಿ ಶಾಸಕ ಲಾಲಾಜಿ ಆರ್.ಮೆಂಡನ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅಂತಿಮ ದರ್ಶನ ಪಡೆದರು.

ಗೋಪಾಲ್ ರಾವ್ ನಿಧನಕ್ಕೆ ಸಂಸದೆ ಶೋಭಾ ಕರಂದ್ಲಾಜೆ, ಅದಮಾರು ಮಠದ ಹಿರಿಯ ಯತಿ ಶ್ರೀವಿಶ್ವಪ್ರಿಯತೀರ್ಥ ಸ್ವಾಮೀಜಿ ಮತ್ತು ಪರ್ಯಾಯ ಪೀಠಾಧಿಪತಿ ಶ್ರಿಈಶಪ್ರಿಯ ತೀರ್ಥ ಸ್ವಾಮೀಜಿ, ದೆಹಲಿ ಕನ್ನಡಿಗ ಪತ್ರಿಕೆಯ ಸಂಪಾದಕ ಬಾ. ಸಾಮಗ ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News